ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ .
ಚಿಕ್ಕಿಂದವಾಡಿ ಗ್ರಾಮದ ಕರಿಯನಪುರ ಗ್ರಾಮದ ರಾಚಯ್ಯ ಎಂಬ ವ್ಯಕ್ತಿ ಹಸುಗಳನ್ನು ಮೇಯಿಸುತ್ತಿದ್ದಾಗ ಕಾಣೆಯಾಗಿದ್ದ ಹಸುವೊಂದನ್ನು ಹುಡುಕಿಕೊಂಡು ಹೋದಾಗ ಚಿರತೆಯು ಬೇಟೆಯಾಡಿ ತಿನ್ನುತ್ತಿರುವ ದೃಶ್ಯವನ್ನು ಕಣ್ಣಾರೆ ಕಂಡು ಭಯಭೀತನಾಗಿ ಓಡಿ ಬಂದು ಗ್ರಾಮಸ್ಥರ ಬಳಿ ವಿಷಯ ತಿಳಿಸಿದ್ದಾನೆ. ತಕ್ಷಣ ಜನರ ಗುಂಪು ಹೋಗಿ ಚಿರತೆಯನ್ನು ಓಡಿಸಿರುವ ಘಟನೆ ನಡೆದಿದೆ.
ಈ ಘಟನೆಯಿಂದ ಪಶುಪಾಲಕರಾಗಿರುವ ಗ್ರಾಮಸ್ಥರು ಭಯಬೀತರಾಗಿದ್ದು, ಬೇಟೆಯ ರುಚಿಕಂಡಿರುವ ಚಿರತೆಯು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಹಸು ಕುರಿಗಳನ್ನು ಬೇಟೆಯಾಡಬಹುದು. ಆದ್ದರಿಂದ
ಅರಣ್ಯ ಇಲಾಖೆಯವರು ಸೂಕ್ತ ಸ್ಥಳದಲ್ಲಿ ಬೋನು ಇಟ್ಟು ಚಿರತೆಯನ್ನು ಬಂಧಿಸಬೇಕು, ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…