ಜಿಲ್ಲೆಗಳು

ಚಿರತೆ ದಾಳಿಗೆ ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ

ಹನೂರು: ಚಿರತೆ ದಾಳಿಗೆ ಹಸು ಒಂದು ಬಲಿಯಾಗಿರುವ ಘಟನೆ ಕಾವೇರಿ ವನ್ಯಜೀವಿ ಅರಣ್ಯ ವಲಯ ವ್ಯಾಪ್ತಿಯ ಚಿಕ್ಕಿಂದುವಾಡಿ ಗ್ರಾಮದ ಸಮೀಪ ಕಂಡು ಬಂದಿದ್ದು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ .

ಚಿಕ್ಕಿಂದವಾಡಿ ಗ್ರಾಮದ ಕರಿಯನಪುರ ಗ್ರಾಮದ ರಾಚಯ್ಯ ಎಂಬ ವ್ಯಕ್ತಿ ಹಸುಗಳನ್ನು ಮೇಯಿಸುತ್ತಿದ್ದಾಗ ಕಾಣೆಯಾಗಿದ್ದ ಹಸುವೊಂದನ್ನು ಹುಡುಕಿಕೊಂಡು ಹೋದಾಗ ಚಿರತೆಯು ಬೇಟೆಯಾಡಿ ತಿನ್ನುತ್ತಿರುವ ದೃಶ್ಯವನ್ನು ಕಣ್ಣಾರೆ ಕಂಡು ಭಯಭೀತನಾಗಿ ಓಡಿ ಬಂದು ಗ್ರಾಮಸ್ಥರ ಬಳಿ ವಿಷಯ ತಿಳಿಸಿದ್ದಾನೆ. ತಕ್ಷಣ ಜನರ ಗುಂಪು ಹೋಗಿ ಚಿರತೆಯನ್ನು ಓಡಿಸಿರುವ ಘಟನೆ ನಡೆದಿದೆ.

ಈ ಘಟನೆಯಿಂದ ಪಶುಪಾಲಕರಾಗಿರುವ ಗ್ರಾಮಸ್ಥರು ಭಯಬೀತರಾಗಿದ್ದು, ಬೇಟೆಯ ರುಚಿಕಂಡಿರುವ ಚಿರತೆಯು ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿ ಹಸು ಕುರಿಗಳನ್ನು ಬೇಟೆಯಾಡಬಹುದು. ಆದ್ದರಿಂದ
ಅರಣ್ಯ ಇಲಾಖೆಯವರು ಸೂಕ್ತ ಸ್ಥಳದಲ್ಲಿ ಬೋನು ಇಟ್ಟು ಚಿರತೆಯನ್ನು ಬಂಧಿಸಬೇಕು, ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago