ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿ ವ್ಯಾಪ್ತಿಯ ಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಗೊರವನಹಳ್ಳಿ ಗ್ರಾಮ ಸಮೀಪದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬನ ಮೇಲೆ ದಾಳಿ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಗ್ರಾಮದ ರೈತ ನಿಂಗೇಗೌಡ ಎಂಬವರು ಜಮೀನಿನಲ್ಲಿ ಕಬ್ಬಿನ ತರಗು ಸುಡುವ ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಚಿರತೆ ದಾಳಿ ನಡೆಸಿದೆ. ತಕ್ಷಣ ಅವರು ತಮ್ಮ ಕೈುಂಲ್ಲಿದ್ದ ಕುಡಿಗೋಲಿನಿಂದ ಬಲವಾಗಿ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಚಿರತೆ ಅವರನ್ನು ಪರಚಿ ಪರಾರಿಯಾಗಿದೆ..
ನಿಂಗೇಗೌಡ ಅವರಿಗೆ ಗಾಯಗಳಾಗಿದೆ. ಆದರೆ ಪ್ರಾಣಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಗಾಯಾಳು ನಿಂಗೇಗೌಡರಿಗೆ ಬನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಾಹಿತಿ ದೊರತ ಕೂಡಲೇ ಕಾರ್ಯ ಪ್ರವೃತ್ತರಾದ ಡಿವೈಎಫ್ಆರ್ಒ ಉಮೇಶ್, ಅರಣ್ಯ ಸಂರಕ್ಷಣಾಧಿಕಾರಿ ನಂದಕುಮಾರ್, ಚಾಲಕ ಮಂಜು ಅವರು ಚಿರತೆಗಾಗಿ ತೀವ್ರ ಶೋಧ ನಡೆಸಿದ್ದಾರೆ. ಕಬ್ಬಿನ ಗದ್ದೆಗಳಿರುವುದರಿಂದ ಚಿರತೆ ಪರಾರಿಯಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೂರ: ಚಿರತೆ ದಾಳಿ;೨ ಮೇಕೆ ಸಾವು
ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…