ಜಿಲ್ಲೆಗಳು

ಚಿರತೆ ದಾಳಿ: ವಿದ್ಯಾರ್ಥಿ ಸಾವು

ಬೆಟ್ಟಕ್ಕೆ ಹೊರಟಿದ್ದವನ ಮೇಲೆ ದಾಳಿ ಮಾಡಿದ ಚಿರತೆ

ತಿ. ನರಸೀಪುರ: ಮೈಸೂರು ಭಾಗದಲ್ಲಿ ಚಿರತೆ ಉಪಟಳ ಹೆಚ್ಚಾಗಿರುವ ನಡುವೆಯೇ ಕಾರ್ತಿಕ ಜಾತ್ರೆಗೆಂದು ಹೊರಟಾಗ ಚಿರತೆ ದಾಳಿ ಮಾಡಿ ವಿದ್ಯಾರ್ಥಿ ಮೃತಪಟ್ಟ ಘಟನೆ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಮೈಸೂರಿನ ಮಹಾರಾಜ ಕಾಲೇಜಿನ ವಿದ್ಯಾರ್ಥಿ, ಗ್ರಾಮದ ಚನ್ನಮಲ್ಲದೇವರು ಎಂಬುವವರ ಪುತ್ರ ಮಂಜುನಾಥ್( ೧೯) ಮೃತ ಯುವಕ. ತಿ.ನರಸೀಪುರ ತಾಲ್ಲೂಕಿನ ಸೋಸಲೆ ಹೋಬಳಿ ಉಕ್ಕಲಗೆರೆ ಸುತ್ತಮುತ್ತ ಚಿರತೆ ಕಾಟವಿದ್ದರೂ ಎಂದೂ ಜನರಿಗೆ ತೊಂದರೆ ನೀಡಿರಲಿಲ್ಲ. ಆದರೆ ಜನಸಂದಣಿ ಇದ್ದರೂ ಚಿರತೆ ದಾಳಿಗೆ ವಿದ್ಯಾರ್ಥಿ ಬಲಿಯಾಗಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಮುಂದಾಗಿದ್ದು, ಎಚ್‌ಡಿಕೋಟೆ ಎಸಿಎಫ್ ಶಿವರಾಮ್, ಆರ್‌ಎಫ್‌ಒ ಅವರ ನೇತೃತ್ವದ ತಂಡ ಮೂರು ಬೋನುಗಳನ್ನು ಇರಿಸಿದೆ. ಮೃತನ ಶವವನ್ನು ಮೈಸೂರು ಕೆಆರ್‌ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಶವ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.

ಕಾರ್ತಿಕ ಸೋಮವಾರ ಇದ್ದುದರಿಂದ ಮಲ್ಲಪ್ಪನ ಬೆಟ್ಟದ ಸಮೀಪವಿರುವ ಮುದ್ದು  ಮಾರಮ್ಮ ದೇವಾಲಯದ ಬಳಿ ಸ್ನೇಹಿತರ ಜತೆ ಪೂಜೆಗೆಂದು ಮಂಜುನಾಥ್ ಹೋಗಿದ್ದರು. ಮುಂದೆ ಸಾಗುತ್ತಿದ್ದ ವೇಳೆ ಪೊದೆಯಿಂದ ಜಿಗಿದ ಚಿರತೆ ಮಂಜುನಾಥ್ ಮೇಲೆ ದಾಳಿ ನಡೆಸಿ, ಎಳೆದಾಡಿ ಕತ್ತಿನ ನಾಳವನ್ನು ಕಚ್ಚಿ ರಕ್ತ ಹೀರಿದೆ. ಸ್ನೇಹಿತರು ಕಲ್ಲು ಹೊಡೆದು ರಕ್ಷಿಸಲು  ಪ್ರಯತ್ನ ಮಾಡಿದ್ದಾದರೂ ಪ್ರಯೋಜನವಾಗದೆ ಗ್ರಾಮಸ್ಥರಿಗೆ ತಿಳಿಸಿದಾಗ ಬಂದು ನೋಡುವಷ್ಟರಲ್ಲಿ ಮಂಜುನಾಥನ ಪ್ರಾಣಪಕ್ಷಿ ಹಾರಿ ಹೋಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಕೆಲ ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟವಿದೆ. ಮಹದೇವಮ್ಮ ಎಂಬುವರ ಮನೆಗೆ ನುಗ್ಗಿ ಮೇಕೆಗಳನ್ನು ಚಿರತೆ ಹೊತ್ತೊಯ್ದಿತ್ತು. ನಾಯಿಗಳ ಮೇಲೂ ದಾಳಿ ಮಾಡಿದೆ. ಮಲ್ಲಪ್ಪನ ಬೆಟ್ಟದ ಸುತ್ತ ಮುತ್ತಲಿನ ಗ್ರಾಮದ ಜನ ರಾತ್ರಿ ವೇಳೆ ಹೊರಗೆ ಬರಲು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಗಸ್ತು ತಿರುಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.

ಅರಣ್ಯ ಇಲಾಖೆ ದೌಡು: ವಿಷಯ ತಿಳಿದ ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿಶೇಷ ಕಾರ‌್ಯಪಡೆಯ ೧೫ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಟ್ಟದ ಸುತ್ತಮುತ್ತಲ ಪೊದೆಗಳನ್ನು ತೆರವುಗೊಳಿಸಿದರು. ಸಿಎಫ್ ಡಾ.ಮಾಲತಿಪ್ರಿಯ, ಡಿಸಿಎಫ್ ಕಮಲಾ ಕರಿಕಾಳನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಶಿವರಾಮ್ ಹಾಗೂ ತಂಡ ಗ್ರಾಮದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿತು.

ಈಗಾಗಲೇ ಘಟನೆ ಕುರಿತು ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ. ೨ ಲಕ್ಷ ರೂ. ಪರಿಹಾರವನ್ನು ಕುಟುಂಬಕ್ಕೆ ನೀಡಲಾಗುತ್ತದೆ. ಪ್ರಕ್ರಿಯೆ ಮುಗಿದ ನಂತರ ಉಳಿಕೆ ೫.೫೦ ಲಕ್ಷ ರೂ.ಗಳನ್ನು ಅರಣ್ಯ ಇಲಾಖೆಯಿಂದ ನೀಡಲಾಗುತ್ತದೆ ಎಂದು ಡಿಸಿಎಫ್ ಕಮಲಾ ಕರಿಕಾಳನ್ ತಿಳಿಸಿದರು.
ಸ್ಥಳಕ್ಕೆ ಬನ್ನೂರು ಪೊಲೀಸ್ ಠಾಣೆಯವರು ಭೇಟಿ ನೀಡಿದ್ದರು ಶಾಸಕ ಎಂ. ಅಶ್ವಿನ್ ಕುಮಾರ್ ಕೂಡ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತನ ಕುಟುಂಬಕ್ಕೆ ಸರ್ಕಾರದಿಂದ ಸಿಗಬಹುದಾದ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.

ಮೃತನ ಮನೆಗೆ ಮೈಮುಲ್ ವಾಜಿ ಅಧ್ಯಕ್ಷ ಸಿ.ಓಂಪ್ರಕಾಶ್, ಉಕ್ಕಲಗೆರೆ ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷ ಅಡುಗೆ ಕುವಾರ್, ರೈತ ಮುಖಂಡ ಕಳ್ಳಿಪುರ ಮಹದೇವಸ್ವಾಮಿ, ಕೊನಿಕ್ಸ್ ವಾಜಿ ನಿರ್ದೇಶಕ ಉಕ್ಕಲಗೆರೆ ಬಸವಣ್ಣ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

೧೫ ಚಿರತೆ ಸೆರೆ!

ಮೈಸೂರು ಭಾಗದಲ್ಲಿ ಈ ವರ್ಷದ ಏಪ್ರಿಲ್ ನಂತರ ೧೫ ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಕೆಆರ್‌ಎಸ್, ಮೈಸೂರಿನ ಆರ್‌ಬಿಐ ಘಟಕದ ಆವರಣದಲ್ಲಿ ಚಿರತೆ ಕಾಟ ಇರುವ ದೂರು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಈ ಭಾಗದಲ್ಲಿ ಈವರೆಗೂ ಚಿರತೆ ದಾಳಿ ಅಲ್ಲಲ್ಲಿ ಆಗಿದ್ದರೂ ವ್ಯಕ್ತಿ ಮೃತಪಟ್ಟಿರುವುದು ಇದೇ ಮೊದಲು. ಚಿರತೆ ಸೆರೆಗೆ ಬೋನುಗಳನ್ನು ಇರಿಸಲಾಗಿದ್ದು, ಜನರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುತ್ತೇವೆ.

ಡಾ.ಮಾಲತಿ ಪ್ರಿಯ, ಸಿಎಫ್ ಮೈಸೂರು ವೃತ

andolanait

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

8 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

9 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

10 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

10 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

10 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

11 hours ago