ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಿನ್ನೆ (ಜ.22) ರಂದು ಚಿರತೆ ದಾಳಿಯಿಂದ 11 ವರ್ಷದ ಬಾಲಕ ಸಾವನ್ನಪ್ಪಿದ್ದನು. ಅಲ್ಲದೇ ತಾಲೂಕಿನಲ್ಲಿ ಚಿರತೆಗಳು ನಿರಂತರ ದಾಳಿಯಿಂದ ಪ್ರಾಣಹಾನಿ ಉಂಟಾಗಿದ್ದು, ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಢಳಿತಕ್ಕೆ ಕೂಡಲೆ ಕೋಂಬಿಂಗ್ ನಡೆಸುವಂತೆ ಸೂಚನೆ ನೀಡಿದರು. ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳೆದಿರುವ ಕಬ್ಬು ಬೆಳೆ ಕಟಾವು ಮಾಡುವ ಬಗ್ಗೆ ತುರ್ತು ಸಭೆ ನಡೆಸಲಾಯಿತು. ಸಭೆಯಲ್ಲಿ ನಂಜನಗೂಡಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಯಾಧ್ಯಕ್ಷ, ಸುಮಾರು 200 ಎಕರೆ ಪ್ರದೇಶದಲ್ಲಿ ಪಕ್ವಗೊಂಡಿರುವ ಕಬ್ಬು ಇರುವುದಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…