ಜಿಲ್ಲೆಗಳು

ಚಿರತೆ ದಾಳಿ : 15 ದಿನಗಳಲ್ಲಿ ಕಬ್ಬು ಕಟಾವಿಗೆ ಡಿಸಿ ಆದೇಶ

ಮೈಸೂರು: ಜಿಲ್ಲೆಯ ಟಿ.ನರಸೀಪುರ  ತಾಲೂಕಿನಲ್ಲಿ ನಿರಂತರವಾಗಿ ಚಿರತೆ ದಾಳಿಯಾಗುತ್ತಿರುವ ಹಿನ್ನೆಲೆ 15 ದಿನಗಳಲ್ಲಿ ಪಕ್ವಗೊಂಡಿರುವ ಕಬ್ಬನ್ನು ಕಟಾವು ಮಾಡುವಂತೆ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ. ಟಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಿನ್ನೆ (ಜ.22) ರಂದು ಚಿರತೆ ದಾಳಿಯಿಂದ 11 ವರ್ಷದ ಬಾಲಕ ಸಾವನ್ನಪ್ಪಿದ್ದನು. ಅಲ್ಲದೇ ತಾಲೂಕಿನಲ್ಲಿ ಚಿರತೆಗಳು ನಿರಂತರ ದಾಳಿಯಿಂದ ಪ್ರಾಣಹಾನಿ ಉಂಟಾಗಿದ್ದು, ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಢಳಿತಕ್ಕೆ ಕೂಡಲೆ ಕೋಂಬಿಂಗ್​ ನಡೆಸುವಂತೆ ಸೂಚನೆ ನೀಡಿದರು. ಕಬ್ಬಿನ ಗದ್ದೆಯಲ್ಲಿ ಚಿರತೆಗಳು ಆಶ್ರಯ ಪಡೆಯುತ್ತಿರುವುದರಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳೆದಿರುವ ಕಬ್ಬು ಬೆಳೆ ಕಟಾವು ಮಾಡುವ ಬಗ್ಗೆ ತುರ್ತು ಸಭೆ ನಡೆಸಲಾಯಿತು. ಸಭೆಯಲ್ಲಿ ನಂಜನಗೂಡಿನ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಕಾರ್ಯಾಧ್ಯಕ್ಷ, ಸುಮಾರು 200 ಎಕರೆ ಪ್ರದೇಶದಲ್ಲಿ ಪಕ್ವಗೊಂಡಿರುವ ಕಬ್ಬು ಇರುವುದಾಗಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago