ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ
ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…