ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ
ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ನವದೆಹಲಿ: ನೀಟ್-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಂದು ಪ್ರಧಾನಿ…
ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಇಲ್ಲಿನ ಸಫ್ದರ್ಜಂಗ್…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…
ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…
ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್ ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್ ದೀಪ್ಕೆ…