ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ
ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…
ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…