ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ
ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು ಏಳು ಸ್ಥಾನಗಳು ಖಾಲಿ ಇದ್ದು, 4…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ…
ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರಿಂದು ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ 13 ಮಂದಿ ಶಾಸಕರು(ಓರ್ವ ಎಂಎಲ್ಸಿ…
ಬೆಂಗಳೂರು: ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ರಾಜ್ಯದ 25ನೇ…
ಬೆಂಗಳೂರು: ಸೋನಿಯಾ ಗಾಂಧಿ ಅವರು ನನ್ನ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರಿಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ.…