ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ
ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ.
ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ ಪುತ್ರ ನಂಜುಂಡಸ್ವಾಮಿ ಸೇರಿದ ಈ ಹಸುಗಳನ್ನು ಮನೆ ಮುಂದೆ ಕಟ್ಟಿ ಹಾಕಲಾಗಿತ್ತು.ಸಂಜೆ ೪.೩೦ ಗಂಟೆಯ ಸಮಯದಲ್ಲಿ ದಾಳಿ ಮಾಡಿದ ಚಿರತೆ ಎರಡು ಹಸುಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೊಂದು ಹಸು ತೀವ್ರವಾಗಿ ಗಾಯಗೊಂಡಿದೆ. ಈ ಘಟನೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮದ ಜನರಲ್ಲಿ ಅತಂಕ ಸೃಷ್ಟಿಯಾಗಿದೆ.
ಈ ಬಗ್ಗೆ ನಂಜುಂಡಸ್ವಾಮಿ ಮಾತನಾಡಿ, ಪ್ರತಿ ದಿನ ಒಂದಲ್ಲ ಒಂದು ಪ್ರಾಣಿಯನ್ನು ಚಿರತೆಗಳು ಬಲಿ ತೆಗೆದುಕೊಳ್ಳುತ್ತಿವೆ. ಇದರಿಂದ ನನಗೆ ೧ ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ಇದಲ್ಲದೆ ಜೀವ ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೆ ಅರಣ್ಯ ಅಧಿಕಾರಿಗಳು ಕ್ರಮಕೈಗೊಂಡು ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟು ಜನರು ನೆಮ್ಮದಿಯಿಂದ ಬಾಳುವಂತೆ ರಕ್ಷಣೆ ನಿಡುವಂತೆ ಹಾಗೂ ಮೃತ ಹಸುಗಳಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರು.
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದಲ್ಲಿ…
ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…