ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯರವರ ಪತ್ನಿ ಮಹದೇವಮ್ಮ ಎಂಬಾಕೆಗೆ 7.50 ಲಕ್ಷ ರೂ. ಪರಿಹಾರದ ಚೆಕ್ ನ್ನು ವಿತರಿಸಿದರು.
ಬಳಿಕ ಶಾಸಕರು ಮಾತನಾಡಿ, ಗೋವಿಂದಯ್ಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 7.5ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಪರಿಹಾರ ಹಣವನ್ನು ಸರಿಾಂಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಲಹೆ ನೀಡಿದರು.
ಹನೂರು ವನ್ಯಜೀವಿ ವಲಯ ಎಸಿಎಫ್ ಅಂಕರಾಜು, ಮುಖಂಡರುಗಳಾದ ಶ್ರೀನಿವಾಸ್, ಟಿ.ಮಹದೇವ, ಮಾಜಿ ಛೇರ್ಮನ್ ನರಸಿಂಹಯ್ಯ, ನಾಗೇಶ್, ಎನ್.ಮಹದೇವ, ಕೃಷ್ಣಮೂರ್ತಿ, ಕದರಯ್ಯ ಇತರರು ಹಾಜರಿದ್ದರು.
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…