ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯರವರ ಪತ್ನಿ ಮಹದೇವಮ್ಮ ಎಂಬಾಕೆಗೆ 7.50 ಲಕ್ಷ ರೂ. ಪರಿಹಾರದ ಚೆಕ್ ನ್ನು ವಿತರಿಸಿದರು.
ಬಳಿಕ ಶಾಸಕರು ಮಾತನಾಡಿ, ಗೋವಿಂದಯ್ಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 7.5ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಪರಿಹಾರ ಹಣವನ್ನು ಸರಿಾಂಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಲಹೆ ನೀಡಿದರು.
ಹನೂರು ವನ್ಯಜೀವಿ ವಲಯ ಎಸಿಎಫ್ ಅಂಕರಾಜು, ಮುಖಂಡರುಗಳಾದ ಶ್ರೀನಿವಾಸ್, ಟಿ.ಮಹದೇವ, ಮಾಜಿ ಛೇರ್ಮನ್ ನರಸಿಂಹಯ್ಯ, ನಾಗೇಶ್, ಎನ್.ಮಹದೇವ, ಕೃಷ್ಣಮೂರ್ತಿ, ಕದರಯ್ಯ ಇತರರು ಹಾಜರಿದ್ದರು.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…