ಕೊಳ್ಳೇಗಾಲ: ಕಳೆದ ಮೂರು ತಿಂಗಳ ಹಿಂದೆ ಚಿರತೆ ದಾಳಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಹನೂರು ಶಾಸಕ ಆರ್.ನರೇಂದ್ರ ಅವರು ಪರಿಹಾರದ ಚೆಕ್ ಅನ್ನು ವಿತರಣೆ ಮಾಡಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ಹನೂರು ತಾಲ್ಲೂಕಿನ ಕೆ.ವಿ.ಎನ್.ದೊಡ್ಡಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಗೋವಿಂದಯ್ಯರವರ ಪತ್ನಿ ಮಹದೇವಮ್ಮ ಎಂಬಾಕೆಗೆ 7.50 ಲಕ್ಷ ರೂ. ಪರಿಹಾರದ ಚೆಕ್ ನ್ನು ವಿತರಿಸಿದರು.
ಬಳಿಕ ಶಾಸಕರು ಮಾತನಾಡಿ, ಗೋವಿಂದಯ್ಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 7.5ಲಕ್ಷ ರೂ ಪರಿಹಾರ ವಿತರಿಸಲಾಗಿದೆ. ಪರಿಹಾರ ಹಣವನ್ನು ಸರಿಾಂಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಸಲಹೆ ನೀಡಿದರು.
ಹನೂರು ವನ್ಯಜೀವಿ ವಲಯ ಎಸಿಎಫ್ ಅಂಕರಾಜು, ಮುಖಂಡರುಗಳಾದ ಶ್ರೀನಿವಾಸ್, ಟಿ.ಮಹದೇವ, ಮಾಜಿ ಛೇರ್ಮನ್ ನರಸಿಂಹಯ್ಯ, ನಾಗೇಶ್, ಎನ್.ಮಹದೇವ, ಕೃಷ್ಣಮೂರ್ತಿ, ಕದರಯ್ಯ ಇತರರು ಹಾಜರಿದ್ದರು.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…