ಮೈಸೂರು : ಜಿಲ್ಲೆಯ ತಿ.ನರಸೀಪುರದ ಹೊರಳಹಳ್ಳಿ ಗ್ರಾಮದಲ್ಲಿ ಚಿರತೆ ಹೊತ್ತೊಯ್ದಿದ್ದ 11 ವರ್ಷದ ಬಾಲಕ ಜಯಂತ್ ಮೃತದೇಹ ಪತ್ತೆಯಾಗಿದೆ.
ಗ್ರಾಮದ ದಶಕಂಠ ಎಂಬುವರ ಪುತ್ರ ಜಯಂತ್ ಎಂಬ ಬಾಲಕನೇ ಶವವಾಗಿ ಪತ್ತೆ ಯಾದವ. ಈ ಬಾಲಕ ನೆನ್ನೆ ಸಂಜೆ 3.60ರಲ್ಲಿ ಗ್ರಾಮದಲ್ಲಿರುವ ಅತ್ತೆ ಮನೆಗೆ ಹೋಗಿ ಬಿಸ್ಕೆಟ್ ಪಡೆದುಕೊಂಡು ಬರುತ್ತೇನೆಂದು ಮನೆಯಿಂದ ಹೊರಹೋಗಿದ್ದ ಬಳಿಕ ಮನೆಯವರೆಲ್ಲರೂ ಹುಡುಕಾಡಿದ್ದರೂ ಪತ್ತೆಯಾಗದ ಕಾರಣ ಚಿರತೆ ಎಳೆದುಕೊಂಡು ಹೋಗಿರಬಹುದು ಎಂದು ಶಂಕಿಸಲಾಗಿತ್ತು.
ಇಂದು ಬೆಳಿಗ್ಗೆ ಅರ್ಧ ತಿಂದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿದ್ದು, ಮೃತ ಬಾಲಕನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಚಿರತೆ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಳಿಸಲಾಗಿದ್ದು, ಚಿರತೆ ಸೆರೆ ಹಿಡಿಯುವ ತನಕ ಗ್ರಾಮಸ್ಥರು ಸಾಕಷ್ಟು ಜಾಗೃತರಾಗಿ ಇರುವಂತೆ ತಿಳಿಸಿದ್ದಾರೆ.
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…
ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು…