ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ.
ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಎಂಬವರು ಮನೆ ಮುಂದಿನ ಜಮೀನಿಗೆ ತೆರಳುತ್ತಿದ್ದ ವೇಳೆ ಚಿರತೆ ಕಂಡು ಗಾಬರಿಗೊಂಡಿದ್ದಾರೆ.
ಈ ವೇಳೆ ಗ್ರಾಮಸ್ಥರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರೂ ಸಿಗಲಿಲ್ಲ. ಮತ್ತೆ ರಾತ್ರಿ ತೆಂಗಿನ ಮರದ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮೊಬೈಲ್ ಮೂಲಕ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆಮಾಡಿದ್ದು, ಜನರು ಜಮೀನುಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಸರೆ ಹಿಡಿದು ಗ್ರಾಮಸ್ಥರಲ್ಲಿನ ಆತಂಕವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸೆರೆ ಹಿಡಿಯಲು ಕ್ರಮ: ಈಗಾಗಲೇ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲಾಗುವುದು. ಜನರು ಎಚ್ಚರಿಕೆಯಿಂದ ಓಡಾಡಬೇಕೆಂದು ಪ್ರಾದೇಶಿಕ ಅರಣ್ಯ ವಿಭಾಗದ ಆರ್ಎಫ್ಒ ನಂದಕುವಾರ್ ಮನವಿ ವಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…