ಜಿಲ್ಲೆಗಳು

ಹುಣಸೂರು: ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ಜನರು

ಹನಗೋಡು: ಹಾಡಹಗಲೇ ಮನೆ ಬಳಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರನ್ನು ಭಯಬೀತರನ್ನಾಗಿಸಿರುವ ಘಟನೆ ಹಳೇವಾರಂಚಿ ಗ್ರಾಮದಲ್ಲಿ ನಡೆದಿದೆ.

ಹನಗೋಡು ಹೋಬಳಿಯ ಹಳೆವಾರಂಚಿ ಗ್ರಾಮದ ರವಿ ಎಂಬವರ ಮನೆ ಪಕ್ಕದಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಕಾಣಿಸಿಕೊಂಡಿದ್ದು, ರವಿಯವರ ಪತ್ನಿ ಕವಿತಾ ಎಂಬವರು ಮನೆ ಮುಂದಿನ ಜಮೀನಿಗೆ ತೆರಳುತ್ತಿದ್ದ ವೇಳೆ ಚಿರತೆ ಕಂಡು ಗಾಬರಿಗೊಂಡಿದ್ದಾರೆ.

ಈ ವೇಳೆ ಗ್ರಾಮಸ್ಥರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಹುಡುಕಾಟ ನಡೆಸಿದರೂ ಸಿಗಲಿಲ್ಲ. ಮತ್ತೆ ರಾತ್ರಿ ತೆಂಗಿನ ಮರದ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮೊಬೈಲ್ ಮೂಲಕ ಚಿರತೆಯ ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಇದರಿಂದ ಗ್ರಾಮದಲ್ಲಿ ಆತಂಕ ಮನೆಮಾಡಿದ್ದು, ಜನರು ಜಮೀನುಗಳಿಗೆ ಹೋಗಲು ಹೆದರುತ್ತಿದ್ದಾರೆ. ಆದ್ದರಿಂದ ಅರಣ್ಯ ಇಲಾಖೆಯವರು ಚಿರತೆಯನ್ನು ಸರೆ ಹಿಡಿದು ಗ್ರಾಮಸ್ಥರಲ್ಲಿನ ಆತಂಕವನ್ನು ದೂರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸೆರೆ ಹಿಡಿಯಲು ಕ್ರಮ: ಈಗಾಗಲೇ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇರಿಸಲಾಗುವುದು. ಜನರು ಎಚ್ಚರಿಕೆಯಿಂದ ಓಡಾಡಬೇಕೆಂದು ಪ್ರಾದೇಶಿಕ ಅರಣ್ಯ ವಿಭಾಗದ ಆರ್‌ಎಫ್‌ಒ ನಂದಕುವಾರ್ ಮನವಿ ವಾಡಿದ್ದಾರೆ.

 

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago