ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ.
ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, ಮೊಬೈಲ್ ನಲ್ಲಿ ಪೊಟೋ ತೆಗೆದಿದ್ದಾರೆ.
ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬೆಟ್ಟದ ತಪ್ಪಲಿನ ಕಿಲಗೆರೆ ಗ್ರಾಮದ ಹುಲಗಾದ್ರಿನಾಯ್ಕ ಎಂಬುವರಿಗೆ ಸೇರಿದ ಕುರಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ದನಗಾಹಿಗಳು ಬೆಟ್ಟದ ತಪ್ಪಲಿಗೆ ತಮ್ಮ ಜಾನುವಾರು ಮೇಯಿಸಿಕೊಂಡು ಬರಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಭಕ್ತಾದಿಗಳು ಬೆಟ್ಟದಲ್ಲಿ ಪೂಜೆ ಸಲ್ಲಿಸಲು ಮುಂಜಾನೆ, ರಾತ್ರಿ ವೇಳೆ ದ್ವಿ ಚಕ್ರ ವಾಹನಗಳಲ್ಲಿ ತೆರಳುತ್ತಿದ್ದು, ಈಗ ಅವರೆಲ್ಲ ಭಯಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಟ್ಟದ ತಪ್ಪಲಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯುಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…