ಗುಂಡ್ಲುಪೇಟೆ : ತಾಲೂಕಿನ ತೆರಕಣಾಂಬಿ ಗ್ರಾಮದ ಸಮೀಪವಿರುವ ಹುಲಗನಮುರಡಿ ವೆಂಕಟರಮಣ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಬೆಟ್ಟಕ್ಕೆ ಹೋಗುವ ಭಕ್ತಾದಿಗಳು ಹಾಗೂ ದನಗಾಹಿಗಳು ಭಯಭೀತರಾಗಿದ್ದಾರೆ.
ಬೆಟ್ಟದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಶುಕ್ರವಾರ ಸಂಜೆ ಬೆಟ್ಟಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಕಣ್ಣಿಗೆ ಬಿದ್ದಿದ್ದು, ಮೊಬೈಲ್ ನಲ್ಲಿ ಪೊಟೋ ತೆಗೆದಿದ್ದಾರೆ.
ಕಳೆದ ಮೂರು ನಾಲ್ಕು ದಿನಗಳ ಹಿಂದೆ ಬೆಟ್ಟದ ತಪ್ಪಲಿನ ಕಿಲಗೆರೆ ಗ್ರಾಮದ ಹುಲಗಾದ್ರಿನಾಯ್ಕ ಎಂಬುವರಿಗೆ ಸೇರಿದ ಕುರಿಯ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ದನಗಾಹಿಗಳು ಬೆಟ್ಟದ ತಪ್ಪಲಿಗೆ ತಮ್ಮ ಜಾನುವಾರು ಮೇಯಿಸಿಕೊಂಡು ಬರಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಭಕ್ತಾದಿಗಳು ಬೆಟ್ಟದಲ್ಲಿ ಪೂಜೆ ಸಲ್ಲಿಸಲು ಮುಂಜಾನೆ, ರಾತ್ರಿ ವೇಳೆ ದ್ವಿ ಚಕ್ರ ವಾಹನಗಳಲ್ಲಿ ತೆರಳುತ್ತಿದ್ದು, ಈಗ ಅವರೆಲ್ಲ ಭಯಗೊಂಡಿದ್ದಾರೆ. ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಟ್ಟದ ತಪ್ಪಲಿನಲ್ಲಿ ಬೋನ್ ಇಟ್ಟು ಚಿರತೆಯನ್ನು ಸೆರೆ ಹಿಡಿಯುಂತೆ ಒತ್ತಾಯಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…