ಜಿಲ್ಲೆಗಳು

CFTRI ಕ್ಯಾಂಪಸ್‌ ನಲ್ಲಿ ಚಿರತೆಗೆ ಶೋಧ, ಪುನುಗು ಬೆಕ್ಕು ಪ್ರತ್ಯಕ್ಷ

ಮೈಸೂರು: ನಗರದ ಹೃದಯ ಭಾಗದಲ್ಲಿರುವ ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾಲಯ( ಸಿಎಫ್‌ ಟಿಆರ್‌ಐ )ದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಗುರುವಾರವೂ ಮುಂದುವರೆದಿದ್ದು, ಚಿರತೆಯ ಯಾವುದೇ ಕುರುಹು ಇನ್ನೂ ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಸಿಎಫ್‌ ಟಿಆರ್‌ಐ ಶಾಲೆಗೆ ಗುರುವಾರವೂ ರಜೆ ನೀಡಲಾಗಿತ್ತು.
ಸಿಎ-ಟಿಆರ್‌ಐ ಆವರಣದಲ್ಲಿ ಯಾವುದೇ ಸಣ್ಣ ಪ್ರಾಣಿ-ಪಕ್ಷಿಗಳು ಸದ್ದು ಮಾಡಿದರೂ ಅದು ಚಿರತೆಯೇ ಎನ್ನುವ ಮಟ್ಟಿಗೆ ಭೀತಿ ನಿರ್ಮಾಣವಾಗಿದೆ. ಆದರೂ ಇಲ್ಲಿನ ನಿವಾಸಿಗಳು, ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ನಿರಾತಂಕವಾಗಿ ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ.

ಕಾಣಿಸದ ಚಿರತೆ: ಮಂಗಳವಾರ ತಡರಾತ್ರಿ ಸಿಎ-ಫ್‌ ಟಿಆರ್‌ಐ ಶಾಲೆಯ ಮೈದಾನದ ಪಕ್ಕದಲ್ಲಿ ಚಿರತೆಯೊಂದು ಓಡಾಡುವುದನ್ನು ಭದ್ರತಾ ಸಿಬ್ಬಂದಿ ಪ್ರಭಾಕರ್ ಎಂಬವರು ನೋಡಿ ಮಾಹಿತಿ ನೀಡಿದ್ದರು. ಬುಧವಾರ ಮುಂಜಾನೆಯೇ ಈ ಮಾಹಿತಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗೆ ತಿಳಿಸಲಾಗಿದ್ದು, ತಕ್ಷಣ ಅವರು ಕಾರ್ಯಾಚರಣೆ ಆರಂಭಿಸಿದ್ದರು. ಬುಧವಾರ ದಿನವಿಡೀ ಆವರಣದಲ್ಲಿ ಶೋಧ ನಡೆಸಿದ ಅರಣ್ಯ ಇಲಾಖೆ ಮತ್ತು ಸಿಎ-ಫ್‌ ಟಿಆರ್‌ಐ ಭದ್ರತಾ ಸಿಬ್ಬಂದಿಗೆ ಚಿರತೆ ಕಂಡು ಬಂದಿಲ್ಲ. ಚಿರತೆ ಸೆರೆಗೆ ಬೋನು ಕೂಡ ಇಡಲಾಗಿದ್ದು, ರಾತ್ರಿ ವೇಳೆ ದೃಶ್ಯ ಸೆರೆ ಹಿಡಿಯುವ 10 ಅತ್ಯಾಧುನಿಕ ಸಿಸಿ ಕೆಮರಾಗಳನ್ನು ಅರಣ್ಯ ಇಲಾಖೆ ವತಿಯಿಂದ ಆವರಣದಲ್ಲಿ ಅಳವಡಿಸಲಾಗಿದೆ. ಈ ಕ್ಯಾಮರಾಗಳಲ್ಲಿ ಚಿರತೆ ಚಲನ-ವಲನವಿರುವ ದೃಶ್ಯಗಳು ಸೆರೆಯಾದರೆ, ತಕ್ಷಣ ಮೆಸೇಜ್ ಬರಲಿದೆ. ಇನ್ನು ಈ ಕ್ಯಾಮರಾಗಳನ್ನು ಪರಿಶೀಲಿಸಿದ್ದು, ಚಿರತೆಯ ಸಣ್ಣ ಕುರುಹುಗಳು ಕಂಡು ಬಂದಿಲ್ಲ. ಚಿರತೆ ಕಾಣಿಸಿಕೊಂಡು, ಬೋನು ಇಡಲಾಗಿರುವ ಜಾಗಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಯ ಹೊರತಾಗಿ ಯಾರೂ ಹೋಗದಂತೆ ಬ್ಯಾರಿಕೇಡ್ ಹಾಕಲಾಗಿದೆ.

ಚಿರತೆ ಬದಲು ಪುನುಗು ಬೆಕ್ಕು ಪ್ರತ್ಯಕ್ಷ

ಬುಧವಾರ ರಾತ್ರಿ 8.30 ರ ಸುಮಾರಿನಲ್ಲಿ ಸಿಎಫ್‌ -ಟಿಆರ್‌ಐ ಆವರಣಕ್ಕೆ ಹೊಂದಿಕೊಂಡಂತೆ ಇರುವ ನ್ಯಾಯಾಧೀಶರ ಕ್ವಾರ್ಟರ್ಸ್‌ ಬಳಿ ಯಾವುದೋ ಪ್ರಾಣಿ ಸದ್ದು ಮಾಡುತ್ತಾ, ಓಡಾಡಿದಂತೆ ಕಂಡು ಬಂದಿದ್ದು ಸಿಎಫ್‌ -ಟಿಆರ್‌ಐ ಭದ್ರತಾ ಸಿಬ್ಬಂದಿಯೊಬ್ಬರು ತಕ್ಷಣ ಅಲ್ಲಿಯೇ ಇದ್ದ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಅದು ಪುನುಗು ಬೆಕ್ಕು ಎಂಬುದು ತಿಳಿದು ಬಂದಿದೆ.

ರಾತ್ರಿ ವೇಳೆ ದೃಶ್ಯ ಸೆರೆ ಹಿಡಿಯುವ 10 ಅತ್ಯಾಧುನಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಸಿಸಿಟಿವಿ -ಪೂಟೇಜ್‌ಗಳನ್ನು ಪರಿಶೀಲಿಸಲಾಗಿದ್ದು, ಇದುವರೆಗೂ ಯಾವುದೇ ವನ್ಯ ಪ್ರಾಣಿಗಳ ಚಲನವಲನ ಕಂಡುಬಂದಿಲ್ಲ. ರಾತ್ರಿಯಿಡೀ ನಮ್ಮ ಸಿಬ್ಬಂದಿ ಆವರಣದಲ್ಲಿಯೇ ಇದ್ದು ವಾಚ್ ಮಾಡಿದ್ದಾರೆ. ನಾನು ಕೂಡ ರಾತ್ರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಬಂದಿದ್ದೇನೆ. ಚಿರತೆಯ ಹೆಜ್ಜೆ ಗುರುತುಗಳು ಕೂಡ ಕಂಡು ಬಂದಿಲ್ಲ. ನ್ಯಾಯಾಧೀಶರ ವಸತಿ ಗೃಹದ ಬಳಿ ಯಾವುದೋ ಪ್ರಾಣಿ ಸದ್ದು ಮಾಡಿತು ಎಂದರು. ಸಿಬ್ಬಂದಿ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅದು ಪುನುಗು ಬೆಕ್ಕು ಎಂಬುದು ತಿಳಿದು ಬಂದಿದೆ. ಇನ್ನೂ ಹೆಚ್ಚುವರಿ 10 ಸಿಸಿ ಕೆಮೆರಾಗಳನ್ನು ಅಳವಡಿಸಲಾಗುವುದು. ಅಗತ್ಯ ಕಂಡು ಬಂದರೆ ಮಾತ್ರ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

– ಡಿ. ಮಹೇಶ್ ಕುಮಾರ್, ಡಿಸಿಎ- ಮೈಸೂರು.


ಚಿರತೆ ಕಾಣಿಸಿಕೊಂಡಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಾಲೆಗೆ ರಜೆ ನೀಡಲಾಗಿದೆ. ಕೆಲಸದ ಹಿನ್ನೆಲೆಯಲ್ಲಿ ಮಾಮೂಲಿಯಂತೆ ಓಡಾಡುತ್ತಿದ್ದಾರೆ. ಅಂತಹ ಆತಂಕವೇನೂ ಕಾಣುತ್ತಿಲ್ಲ.
-ವಿಜಯ್, ಸಹಾಯಕ ಸಿಬ್ಬಂದಿ, ಸಿಎಫ್‌ -ಟಿಆರ್‌ಐ

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

4 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

4 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

5 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

6 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

7 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

10 hours ago