ಜಿಲ್ಲೆಗಳು

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ ಬೋನಿಗೆ ಬಿದ್ದಿದೆ.

ತಾಲೂಕಿನ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಕಾಣಿಸಿಕೊಂಡು ಅನೇಕ ಸಾಕು ಪ್ರಾಣಿಗಳನ್ನು ತಿಂದು ಜನರಿಗೆ ಉಪಟಳ ನೀಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದ್ದು ಅದೇ ರೀತಿ ರಾಮನ ತುಂಗಾ ಗ್ರಾಮದ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ಚಿರತೆ ಮರಿಗಳು ಆ ಭಾಗದಲ್ಲಿನ ಮನೆಗಳ ಮೇಲೆ ದಾಳಿ ಮಾಡಿ ಕೋಳಿ ಕುರಿಗಳನ್ನು ತಿನ್ನುತ್ತಿದ್ದು ಅದೇ ರೀತಿ ಒಂದು ವಾರದ ಹಿಂದೆ ಗ್ರಾಮದಿಂದ ಹೆಂಗಸು ತನ್ನ ಜಮೀನಿಗೆ ತನ್ನ ಕುರಿಮರಿಯನ್ನು ಹಿಡಿದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದ್ದು ಆ ಸಂದರ್ಭದಲ್ಲಿ ಹೆಂಗಸು ಕೂಗಾಡಿ ಕಿರುಚಾಡಿ ಕುರಿಮರಿಯ ಹಗ್ಗವನ್ನು ಬಿಡದೆ ಅದನ್ನ ರಕ್ಷಣೆ ಮಾಡಿದ್ದು ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಆ ಪ್ರದೇಶದಲ್ಲಿ ಬೋನ್ ಇಟ್ಟಿದ್ದು ಆ ಸಂದರ್ಭದಲ್ಲಿ ಪ್ರದೇಶದ ಭಾಗದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಕೂಡಲೇ ಇದನ್ನು ಗಮನಿಸಿಕೊಂಡ ನೆರೆ ಹೊರೆಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮುಂಜಾನೆ ಒಂದು ಗಂಟೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಸಾರ್ವಜನಿಕರ ಆತಂಕ ದೂರ ಮಾಡಿದರು ಜನರು ಆತಂಕದಲ್ಲಿದ್ದಾರೆ ಈ ಸಂದರ್ಭದಲ್ಲಿ ಡಿ ಆರ್ ಎಫ್ ಓಗಳಾದ ಪಾರ್ವತಿ ,ಸಿಬ್ಬಂದಿಗಳಾದ ಹರೀಶ್ ,ಸತೀಶ್ ,ಗಾಂಚಾಯಲ್, ಹರೀಶ್, ರವಿ ,ಇರ್ಫಾನ್, ಹರೀಶ್, ರಾಜಯ್ಯ, ಪುನೀತ್, ಮತ್ತಿತರರು ಹಾಜರಿದ್ದರು,
ಹೇಳಿಕೆ: ಕಿರಣ್ ಕುಮಾರ್, ವಲಯ ಅರಣ್ಯ ಅಧಿಕಾರಿ ಪಿರಿಯಾಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಮತ್ತು ಚಿರತೆ ಮರಿಗಳು ಕಾಣಿಸಿಕೊಂಡು ಅನೇಕ ಗ್ರಾಮಗಳಲ್ಲಿ ಈಗಾಗಲೇ ಕುರಿ ಮತ್ತು ಕೋಳಿಯನ್ನು ಹಿಡಿದು ತೊಂದರೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಉಪಟಳ ನೀಡುತ್ತಿರುವಂತಹ ಚಿರತೆಗಳ ಸೆರೆಹಿಡಿಯಲು ಈಗಾಗಲೇ ಕ್ರಮ ಕೈಗೊಂಡು ಬೋನ್ ಇಡುತ್ತಿದ್ದು ಆದರೂ ಚಿರತೆಗಳು ಬೋನಿಗೆ ಬೀಳುತ್ತಿಲ್ಲ ಆದಕಾರಣ ರಾಮನತುಂಗ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನೂ ಎರಡು ಚಿರತೆ ಮರಿಗಳು ಇದ್ದು ಅವುಗಳು ಬೆಳಗಿನ ಮತ್ತು ಮುಸ್ಸಂಜೆ ಸಮಯದಲ್ಲಿ ಹೊರ ಬರುತ್ತಿದ್ದು ಆ ಭಾಗದಲ್ಲಿ ಓಡಾಡುವಂತಹ ಜನರು ಎಚ್ಚರದಿಂದ ಇರಬೇಕು ಹಾಗೂ ಸಂಜೆ ಸಮಯದಲ್ಲಿ ಯಾವುದೇ ಮಕ್ಕಳನ್ನು ಹೊರಗೆ ಕಳಿಸಿದಂತೆ ಎಚ್ಚರ ವಹಿಸಬೇಕು ಮತ್ತು ಆ ಭಾಗಗಳಲ್ಲಿ ರೈತರು ತಮ್ಮ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿ ಕೊಂಡಿಲ್ಲ ಹಾಗೂ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿಕೊಂಡು ತಮ್ಮ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಲು ಎಚ್ಚರ ವಹಿಸಬೇಕು ಆಗೇನಾದರೂ ಚಿರತೆಗಳ ಚಲನವಲನ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ತಿಳಿಸುವಂತೆ ಪತ್ರಿಕೆಗೆ ತಿಳಿಸಿದ್ದಾರೆ

andolanait

Recent Posts

ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು: ಸಚಿವ ಎಂ.ಬಿ.ಪಾಟೀಲ್‌ ಆಗ್ರಹ

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು…

17 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಸಹಾಯವಾಣಿ ತೆರೆದ ಹಾಸನ ಜಿಲ್ಲಾಡಳಿತ

ಹಾಸನ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ಜಂಟಿ ದಾಳಿ ನಡೆಸುತ್ತಿರುವ ಪರಿಣಾಮ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಸರ್ಕಾರ ದುಬೈ ಸೇರಿದಂತೆ…

36 mins ago

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ…

54 mins ago

ಅಮೇರಿಕಾ-ಇಸ್ರೇಲ್‌ ಜಂಟಿ ದಾಳಿ: ಒಂದೇ ಬಾರಿಗೆ ಇರಾನಿನ 48 ನಾಯಕರು ಸಾವು

ಟೆಹರಾನ್:‌ ಇರಾನ್‌ ವಿರುದ್ಧ ಅಮೇರಿಕಾ ಹಾಗೂ ಇಸ್ರೇಲ್‌ ನಡೆಸಿದ ಜಂಟಿ ಮಿಲಿಟರಿ ಕಾರ್ಯಾಚರಣೆಯಲ್ಲಿ 48 ಇರಾನಿನ ನಾಯಕರು ಸಾವನ್ನಪ್ಪಿದ್ದಾರೆ ಎಂದು…

1 hour ago

ಹನೂರು: ನಾಳೆ ಚಂದ್ರಗಹಣವಿದ್ದರೂ ಭಕ್ತರಿಗೆ ಮಹದೇಶ್ವರನ ದರ್ಶನಕ್ಕಿಲ್ಲ ತೊಂದರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್.3ರ ಮಂಗಳವಾರ ಮಧ್ಯಾಹ್ನದ ನಂತರ ಚಂದ್ರಗ್ರಹಣವಿದ್ದರೂ ಶ್ರೀ ಮಹದೇಶ್ವರ ಸ್ವಾಮಿಯ…

2 hours ago

ಹುದ್ದೆಗಳ ಭರ್ತಿ ನಡೆಯಲಿ; ಯುವಶಕ್ತಿಯನ್ನು ಕಡೆಗಣಿಸದಿರಲಿ

ಸರ್ಕಾರಿ ನೌಕರಿ ಕನಸಾಗಿಯೇ ಉಳಿದಿದೆ ಎಂಬ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಧಾರವಾಡದಲ್ಲಿ ಮೊದಲ ಬಾರಿಗೆ ಸ್ಛೋಟಗೊಂಡಿದೆ. ಅದರಿಂದ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, …

2 hours ago