ಜಿಲ್ಲೆಗಳು

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ ಬೋನಿಗೆ ಬಿದ್ದಿದೆ.

ತಾಲೂಕಿನ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಕಾಣಿಸಿಕೊಂಡು ಅನೇಕ ಸಾಕು ಪ್ರಾಣಿಗಳನ್ನು ತಿಂದು ಜನರಿಗೆ ಉಪಟಳ ನೀಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದ್ದು ಅದೇ ರೀತಿ ರಾಮನ ತುಂಗಾ ಗ್ರಾಮದ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ಚಿರತೆ ಮರಿಗಳು ಆ ಭಾಗದಲ್ಲಿನ ಮನೆಗಳ ಮೇಲೆ ದಾಳಿ ಮಾಡಿ ಕೋಳಿ ಕುರಿಗಳನ್ನು ತಿನ್ನುತ್ತಿದ್ದು ಅದೇ ರೀತಿ ಒಂದು ವಾರದ ಹಿಂದೆ ಗ್ರಾಮದಿಂದ ಹೆಂಗಸು ತನ್ನ ಜಮೀನಿಗೆ ತನ್ನ ಕುರಿಮರಿಯನ್ನು ಹಿಡಿದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದ್ದು ಆ ಸಂದರ್ಭದಲ್ಲಿ ಹೆಂಗಸು ಕೂಗಾಡಿ ಕಿರುಚಾಡಿ ಕುರಿಮರಿಯ ಹಗ್ಗವನ್ನು ಬಿಡದೆ ಅದನ್ನ ರಕ್ಷಣೆ ಮಾಡಿದ್ದು ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಆ ಪ್ರದೇಶದಲ್ಲಿ ಬೋನ್ ಇಟ್ಟಿದ್ದು ಆ ಸಂದರ್ಭದಲ್ಲಿ ಪ್ರದೇಶದ ಭಾಗದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಕೂಡಲೇ ಇದನ್ನು ಗಮನಿಸಿಕೊಂಡ ನೆರೆ ಹೊರೆಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮುಂಜಾನೆ ಒಂದು ಗಂಟೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಸಾರ್ವಜನಿಕರ ಆತಂಕ ದೂರ ಮಾಡಿದರು ಜನರು ಆತಂಕದಲ್ಲಿದ್ದಾರೆ ಈ ಸಂದರ್ಭದಲ್ಲಿ ಡಿ ಆರ್ ಎಫ್ ಓಗಳಾದ ಪಾರ್ವತಿ ,ಸಿಬ್ಬಂದಿಗಳಾದ ಹರೀಶ್ ,ಸತೀಶ್ ,ಗಾಂಚಾಯಲ್, ಹರೀಶ್, ರವಿ ,ಇರ್ಫಾನ್, ಹರೀಶ್, ರಾಜಯ್ಯ, ಪುನೀತ್, ಮತ್ತಿತರರು ಹಾಜರಿದ್ದರು,
ಹೇಳಿಕೆ: ಕಿರಣ್ ಕುಮಾರ್, ವಲಯ ಅರಣ್ಯ ಅಧಿಕಾರಿ ಪಿರಿಯಾಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಮತ್ತು ಚಿರತೆ ಮರಿಗಳು ಕಾಣಿಸಿಕೊಂಡು ಅನೇಕ ಗ್ರಾಮಗಳಲ್ಲಿ ಈಗಾಗಲೇ ಕುರಿ ಮತ್ತು ಕೋಳಿಯನ್ನು ಹಿಡಿದು ತೊಂದರೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಉಪಟಳ ನೀಡುತ್ತಿರುವಂತಹ ಚಿರತೆಗಳ ಸೆರೆಹಿಡಿಯಲು ಈಗಾಗಲೇ ಕ್ರಮ ಕೈಗೊಂಡು ಬೋನ್ ಇಡುತ್ತಿದ್ದು ಆದರೂ ಚಿರತೆಗಳು ಬೋನಿಗೆ ಬೀಳುತ್ತಿಲ್ಲ ಆದಕಾರಣ ರಾಮನತುಂಗ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನೂ ಎರಡು ಚಿರತೆ ಮರಿಗಳು ಇದ್ದು ಅವುಗಳು ಬೆಳಗಿನ ಮತ್ತು ಮುಸ್ಸಂಜೆ ಸಮಯದಲ್ಲಿ ಹೊರ ಬರುತ್ತಿದ್ದು ಆ ಭಾಗದಲ್ಲಿ ಓಡಾಡುವಂತಹ ಜನರು ಎಚ್ಚರದಿಂದ ಇರಬೇಕು ಹಾಗೂ ಸಂಜೆ ಸಮಯದಲ್ಲಿ ಯಾವುದೇ ಮಕ್ಕಳನ್ನು ಹೊರಗೆ ಕಳಿಸಿದಂತೆ ಎಚ್ಚರ ವಹಿಸಬೇಕು ಮತ್ತು ಆ ಭಾಗಗಳಲ್ಲಿ ರೈತರು ತಮ್ಮ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿ ಕೊಂಡಿಲ್ಲ ಹಾಗೂ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿಕೊಂಡು ತಮ್ಮ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಲು ಎಚ್ಚರ ವಹಿಸಬೇಕು ಆಗೇನಾದರೂ ಚಿರತೆಗಳ ಚಲನವಲನ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ತಿಳಿಸುವಂತೆ ಪತ್ರಿಕೆಗೆ ತಿಳಿಸಿದ್ದಾರೆ

andolanait

Recent Posts

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

11 mins ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

13 mins ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

18 mins ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

25 mins ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

4 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

4 hours ago