ಜಿಲ್ಲೆಗಳು

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ ಬೋನಿಗೆ ಬಿದ್ದಿದೆ.

ತಾಲೂಕಿನ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಕಾಣಿಸಿಕೊಂಡು ಅನೇಕ ಸಾಕು ಪ್ರಾಣಿಗಳನ್ನು ತಿಂದು ಜನರಿಗೆ ಉಪಟಳ ನೀಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದ್ದು ಅದೇ ರೀತಿ ರಾಮನ ತುಂಗಾ ಗ್ರಾಮದ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ಚಿರತೆ ಮರಿಗಳು ಆ ಭಾಗದಲ್ಲಿನ ಮನೆಗಳ ಮೇಲೆ ದಾಳಿ ಮಾಡಿ ಕೋಳಿ ಕುರಿಗಳನ್ನು ತಿನ್ನುತ್ತಿದ್ದು ಅದೇ ರೀತಿ ಒಂದು ವಾರದ ಹಿಂದೆ ಗ್ರಾಮದಿಂದ ಹೆಂಗಸು ತನ್ನ ಜಮೀನಿಗೆ ತನ್ನ ಕುರಿಮರಿಯನ್ನು ಹಿಡಿದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದ್ದು ಆ ಸಂದರ್ಭದಲ್ಲಿ ಹೆಂಗಸು ಕೂಗಾಡಿ ಕಿರುಚಾಡಿ ಕುರಿಮರಿಯ ಹಗ್ಗವನ್ನು ಬಿಡದೆ ಅದನ್ನ ರಕ್ಷಣೆ ಮಾಡಿದ್ದು ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಆ ಪ್ರದೇಶದಲ್ಲಿ ಬೋನ್ ಇಟ್ಟಿದ್ದು ಆ ಸಂದರ್ಭದಲ್ಲಿ ಪ್ರದೇಶದ ಭಾಗದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಕೂಡಲೇ ಇದನ್ನು ಗಮನಿಸಿಕೊಂಡ ನೆರೆ ಹೊರೆಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮುಂಜಾನೆ ಒಂದು ಗಂಟೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಸಾರ್ವಜನಿಕರ ಆತಂಕ ದೂರ ಮಾಡಿದರು ಜನರು ಆತಂಕದಲ್ಲಿದ್ದಾರೆ ಈ ಸಂದರ್ಭದಲ್ಲಿ ಡಿ ಆರ್ ಎಫ್ ಓಗಳಾದ ಪಾರ್ವತಿ ,ಸಿಬ್ಬಂದಿಗಳಾದ ಹರೀಶ್ ,ಸತೀಶ್ ,ಗಾಂಚಾಯಲ್, ಹರೀಶ್, ರವಿ ,ಇರ್ಫಾನ್, ಹರೀಶ್, ರಾಜಯ್ಯ, ಪುನೀತ್, ಮತ್ತಿತರರು ಹಾಜರಿದ್ದರು,
ಹೇಳಿಕೆ: ಕಿರಣ್ ಕುಮಾರ್, ವಲಯ ಅರಣ್ಯ ಅಧಿಕಾರಿ ಪಿರಿಯಾಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಮತ್ತು ಚಿರತೆ ಮರಿಗಳು ಕಾಣಿಸಿಕೊಂಡು ಅನೇಕ ಗ್ರಾಮಗಳಲ್ಲಿ ಈಗಾಗಲೇ ಕುರಿ ಮತ್ತು ಕೋಳಿಯನ್ನು ಹಿಡಿದು ತೊಂದರೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಉಪಟಳ ನೀಡುತ್ತಿರುವಂತಹ ಚಿರತೆಗಳ ಸೆರೆಹಿಡಿಯಲು ಈಗಾಗಲೇ ಕ್ರಮ ಕೈಗೊಂಡು ಬೋನ್ ಇಡುತ್ತಿದ್ದು ಆದರೂ ಚಿರತೆಗಳು ಬೋನಿಗೆ ಬೀಳುತ್ತಿಲ್ಲ ಆದಕಾರಣ ರಾಮನತುಂಗ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನೂ ಎರಡು ಚಿರತೆ ಮರಿಗಳು ಇದ್ದು ಅವುಗಳು ಬೆಳಗಿನ ಮತ್ತು ಮುಸ್ಸಂಜೆ ಸಮಯದಲ್ಲಿ ಹೊರ ಬರುತ್ತಿದ್ದು ಆ ಭಾಗದಲ್ಲಿ ಓಡಾಡುವಂತಹ ಜನರು ಎಚ್ಚರದಿಂದ ಇರಬೇಕು ಹಾಗೂ ಸಂಜೆ ಸಮಯದಲ್ಲಿ ಯಾವುದೇ ಮಕ್ಕಳನ್ನು ಹೊರಗೆ ಕಳಿಸಿದಂತೆ ಎಚ್ಚರ ವಹಿಸಬೇಕು ಮತ್ತು ಆ ಭಾಗಗಳಲ್ಲಿ ರೈತರು ತಮ್ಮ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿ ಕೊಂಡಿಲ್ಲ ಹಾಗೂ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿಕೊಂಡು ತಮ್ಮ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಲು ಎಚ್ಚರ ವಹಿಸಬೇಕು ಆಗೇನಾದರೂ ಚಿರತೆಗಳ ಚಲನವಲನ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ತಿಳಿಸುವಂತೆ ಪತ್ರಿಕೆಗೆ ತಿಳಿಸಿದ್ದಾರೆ

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

6 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

7 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

7 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

7 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

7 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

7 hours ago