ಜಿಲ್ಲೆಗಳು

ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿಟ್ಟುಸಿರು

ಪಿರಿಯಾಪಟ್ಟಣ: ತಾಲೂಕಿನ ರಾಮನಾತುಂಗ ವ್ಯಾಪ್ತಿಯ ಖಾಸಗಿ ಜಮೀನನ್ನು ಒಂದರಲ್ಲಿ ಕಳೆದ 15 ದಿನಗಳಿಂದ ಆಗಾಗ ಕಾಣಿಸಿಕೊಂಡು ಅನೇಕ ಕುರಿ ಮತ್ತು ಕೋಳಿಗಳನ್ನು ತಿಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮಧ್ಯರಾತ್ರಿ ಸುಮಾರು 12:30 ಸಮಯದಲ್ಲಿ ಬೋನಿಗೆ ಬಿದ್ದಿದೆ.

ತಾಲೂಕಿನ ಅನೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಕಾಣಿಸಿಕೊಂಡು ಅನೇಕ ಸಾಕು ಪ್ರಾಣಿಗಳನ್ನು ತಿಂದು ಜನರಿಗೆ ಉಪಟಳ ನೀಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದ್ದು ಅದೇ ರೀತಿ ರಾಮನ ತುಂಗಾ ಗ್ರಾಮದ ವ್ಯಾಪ್ತಿಯ ಹಳ್ಳಿಗಳಲ್ಲಿ ಮೂರು ಚಿರತೆ ಮರಿಗಳು ಆ ಭಾಗದಲ್ಲಿನ ಮನೆಗಳ ಮೇಲೆ ದಾಳಿ ಮಾಡಿ ಕೋಳಿ ಕುರಿಗಳನ್ನು ತಿನ್ನುತ್ತಿದ್ದು ಅದೇ ರೀತಿ ಒಂದು ವಾರದ ಹಿಂದೆ ಗ್ರಾಮದಿಂದ ಹೆಂಗಸು ತನ್ನ ಜಮೀನಿಗೆ ತನ್ನ ಕುರಿಮರಿಯನ್ನು ಹಿಡಿದು ಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಚಿರತೆ ದಾಳಿ ಮಾಡಿದ್ದು ಆ ಸಂದರ್ಭದಲ್ಲಿ ಹೆಂಗಸು ಕೂಗಾಡಿ ಕಿರುಚಾಡಿ ಕುರಿಮರಿಯ ಹಗ್ಗವನ್ನು ಬಿಡದೆ ಅದನ್ನ ರಕ್ಷಣೆ ಮಾಡಿದ್ದು ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಅಧಿಕಾರಿ ಕಿರಣ್ ಕುಮಾರ್ ನೇತೃತ್ವದ ಸಿಬ್ಬಂದಿಗಳು ಆ ಪ್ರದೇಶದಲ್ಲಿ ಬೋನ್ ಇಟ್ಟಿದ್ದು ಆ ಸಂದರ್ಭದಲ್ಲಿ ಪ್ರದೇಶದ ಭಾಗದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಎರಡು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಕೂಡಲೇ ಇದನ್ನು ಗಮನಿಸಿಕೊಂಡ ನೆರೆ ಹೊರೆಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಮುಂಜಾನೆ ಒಂದು ಗಂಟೆಗೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸಮೇತ ಬೋನನ್ನು ಸುರಕ್ಷಿತ ಪ್ರದೇಶಕ್ಕೆ ಕೊಂಡೊಯ್ದರು. ಸಾರ್ವಜನಿಕರ ಆತಂಕ ದೂರ ಮಾಡಿದರು ಜನರು ಆತಂಕದಲ್ಲಿದ್ದಾರೆ ಈ ಸಂದರ್ಭದಲ್ಲಿ ಡಿ ಆರ್ ಎಫ್ ಓಗಳಾದ ಪಾರ್ವತಿ ,ಸಿಬ್ಬಂದಿಗಳಾದ ಹರೀಶ್ ,ಸತೀಶ್ ,ಗಾಂಚಾಯಲ್, ಹರೀಶ್, ರವಿ ,ಇರ್ಫಾನ್, ಹರೀಶ್, ರಾಜಯ್ಯ, ಪುನೀತ್, ಮತ್ತಿತರರು ಹಾಜರಿದ್ದರು,
ಹೇಳಿಕೆ: ಕಿರಣ್ ಕುಮಾರ್, ವಲಯ ಅರಣ್ಯ ಅಧಿಕಾರಿ ಪಿರಿಯಾಪಟ್ಟಣ ತಾಲೂಕಿನ ಅನೇಕ ಗ್ರಾಮಗಳಲ್ಲಿ ಪದೇಪದೇ ಚಿರತೆಗಳು ಮತ್ತು ಚಿರತೆ ಮರಿಗಳು ಕಾಣಿಸಿಕೊಂಡು ಅನೇಕ ಗ್ರಾಮಗಳಲ್ಲಿ ಈಗಾಗಲೇ ಕುರಿ ಮತ್ತು ಕೋಳಿಯನ್ನು ಹಿಡಿದು ತೊಂದರೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಉಪಟಳ ನೀಡುತ್ತಿರುವಂತಹ ಚಿರತೆಗಳ ಸೆರೆಹಿಡಿಯಲು ಈಗಾಗಲೇ ಕ್ರಮ ಕೈಗೊಂಡು ಬೋನ್ ಇಡುತ್ತಿದ್ದು ಆದರೂ ಚಿರತೆಗಳು ಬೋನಿಗೆ ಬೀಳುತ್ತಿಲ್ಲ ಆದಕಾರಣ ರಾಮನತುಂಗ ವ್ಯಾಪ್ತಿಯ ಗ್ರಾಮಗಳಲ್ಲಿ ಇನ್ನೂ ಎರಡು ಚಿರತೆ ಮರಿಗಳು ಇದ್ದು ಅವುಗಳು ಬೆಳಗಿನ ಮತ್ತು ಮುಸ್ಸಂಜೆ ಸಮಯದಲ್ಲಿ ಹೊರ ಬರುತ್ತಿದ್ದು ಆ ಭಾಗದಲ್ಲಿ ಓಡಾಡುವಂತಹ ಜನರು ಎಚ್ಚರದಿಂದ ಇರಬೇಕು ಹಾಗೂ ಸಂಜೆ ಸಮಯದಲ್ಲಿ ಯಾವುದೇ ಮಕ್ಕಳನ್ನು ಹೊರಗೆ ಕಳಿಸಿದಂತೆ ಎಚ್ಚರ ವಹಿಸಬೇಕು ಮತ್ತು ಆ ಭಾಗಗಳಲ್ಲಿ ರೈತರು ತಮ್ಮ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿ ಕೊಂಡಿಲ್ಲ ಹಾಗೂ ಕೊಟ್ಟಿಗೆಗಳನ್ನು ಸುರಕ್ಷಿತವಾಗಿ ನಿರ್ಮಾಣ ಮಾಡಿಕೊಂಡು ತಮ್ಮ ಸಾಕು ಪ್ರಾಣಿಗಳನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಲು ಎಚ್ಚರ ವಹಿಸಬೇಕು ಆಗೇನಾದರೂ ಚಿರತೆಗಳ ಚಲನವಲನ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ತಿಳಿಸುವಂತೆ ಪತ್ರಿಕೆಗೆ ತಿಳಿಸಿದ್ದಾರೆ

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

12 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

16 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

16 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

17 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

17 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

18 hours ago