ಜಿಲ್ಲೆಗಳು

ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ರಕ್ಷಣೆ

ಸಮಯ ಪ್ರಜ್ಞೆಯಿಂದ ಉಳಿದ ಜೀವ

ಚಾಮರಾಜನಗರ: ತಾಲ್ಲೂಕಿನ ವೀರನಪುರ ಬಳಿ ಯಾವುದೋ ಪ್ರಾಣಿಗೆ ಹಾಕಿದ್ದ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ.
ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆಯ ಸೊಂಟಕ್ಕೆ ತಂತಿ ಬಿಗಿದು ಕೊಂಡಿದ್ದನ್ನು ಹತ್ತಿರದಿಂದ ಕಂಡ ರೈತರೊಬ್ಬರು ವಿಷಯ ಮುಟ್ಟಿಸಿದ್ದು ಅರಣ್ಯಾಧಿಕಾರಿಗಳು ಸಕಾಲಕ್ಕೆ ತೆರಳಿ ಅದರ ಜೀವ ಉಳಿಸಿದ್ದಾರೆ.
ನಗರ-ಗುಂಡ್ಲುಪೇಟೆ ಮಾರ್ಗದಲ್ಲಿ ಬಣ್ಣಾರಿ ಅಮ್ಮಾನ್ ದೇವಸ್ಥಾನ ಇದ್ದು ಅದರ ಎದುರು ಇರುವ ಕರಿಕಲ್ಲು ಕ್ವಾರಿ ಬಳಿಯ ಹಳ್ಳದಲ್ಲಿ ಚಿರತೆ ಉರುಳಿಗೆ ಸಿಲುಕಿದ್ದು ಗೊತ್ತಾಗಿ ಮಧ್ಯಾಹ್ನ ರಕ್ಷಣೆ ಮಾಡಲಾಗಿದೆ.
ಮೇಲ್ನೋಟಕ್ಕೆ ಹಂದಿಗೆ ಹಾಕಿದ್ದ ಉರುಳಿನಂತೆ ಕಾಣುತ್ತದೆಯಾದರೂ ಇದು ಪ್ರಾಣಿಗಳ ಬೇಟೆಯಾಡುವ ಉದ್ದೇಶದಿಂದ ನುರಿತವರು ಎಸಗಿರುವ ಕೃತ್ಯವೇ ಎಂಬುದರ ಬಗ್ಗೆಯೂ ಇಲಾಖೆ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ.
ಬಿ ಆರ್ ಟಿ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್, ಎಸಿಎಫ್ ಸುರೇಶ್ , ಆರ್ ಎಫ್ ಒ ವಿನೋದ್ ಗೌಡ ಮತ್ತು ಸಿಬ್ಬಂದಿ ವೈದ್ಯರಾದ ಮುಜೀಬ್,ವಸೀಂ ಅವರೊಂದಿಗೆ ಧಾವಿಸಿಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸಿದರು.ನಂತರ ಅದರ ದೇಹ ಪರಿಶೀಲಿಸಿದಾಗ ಯಾವುದೇ ಗಾಯಗಳಾಗಿರಲಿಲ್ಲ.
ಈ ಚಿರತೆಯನ್ನು ಮತ್ತೆ ಕಾಡಿಗೆ ಬಿಡಬೇಕೆ ಅಥವಾ ಮೈಸೂರು ಮೃಗಾಲಯಕ್ಕೆ ಕೊಂಡೊಯ್ಯಬೇಕೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ವಿಚಾರವಾಗಿ ಹಿರಿಯ ಅಧಿಕಾರಿಗಳು ಹೇಗೆ ಹೇಳುತ್ತಾರೆ ಹಾಗೆ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರಜ್ಞೆ ಬಂದ ನಂತರ ಚಿರತೆಯನ್ನುನಲ್ಲೂರು ಅರಣ್ಯ ಕಚೇರಿಯಲ್ಲಿ ಬೋನಿನಲ್ಲಿ ಇರಿಸಲಾಗಿತ್ತು.

andolanait

Recent Posts

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ…

17 mins ago

ಹಿರಿಯ ಸಹೋದರನನ್ನು ಕಳೆದುಕೊಂಡಂತಾಗಿದೆ: ಡಿಸಿಎಂ ಏಕನಾಥ್‌ ಶಿಂಧೆ

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…

42 mins ago

ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧ: ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…

1 hour ago

ಎಲ್ಲಾ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ: ಎಂಎಲ್‌ಸಿ ಶಿವಕುಮಾರ್‌ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿನ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ…

2 hours ago

ವಿಮಾನ ಪತನಕ್ಕೂ ಮುನ್ನ ಅಜಿತ್‌ ಪವಾರ್‌ ಕೊನೆಯ ಪೋಸ್ಟ್‌ ವೈರಲ್‌

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು…

3 hours ago

ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯಾತಿಗಣ್ಯರ ಸಂತಾಪ

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.…

3 hours ago