ಜಿಲ್ಲೆಗಳು

ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆ ರಕ್ಷಣೆ

ಸಮಯ ಪ್ರಜ್ಞೆಯಿಂದ ಉಳಿದ ಜೀವ

ಚಾಮರಾಜನಗರ: ತಾಲ್ಲೂಕಿನ ವೀರನಪುರ ಬಳಿ ಯಾವುದೋ ಪ್ರಾಣಿಗೆ ಹಾಕಿದ್ದ ಉರುಳಿಗೆ ಸಿಲುಕಿ ಒದ್ದಾಡುತ್ತಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಮಂಗಳವಾರ ರಕ್ಷಿಸಿದ್ದಾರೆ.
ಸುಮಾರು ಎರಡೂವರೆ ವರ್ಷದ ಹೆಣ್ಣು ಚಿರತೆಯ ಸೊಂಟಕ್ಕೆ ತಂತಿ ಬಿಗಿದು ಕೊಂಡಿದ್ದನ್ನು ಹತ್ತಿರದಿಂದ ಕಂಡ ರೈತರೊಬ್ಬರು ವಿಷಯ ಮುಟ್ಟಿಸಿದ್ದು ಅರಣ್ಯಾಧಿಕಾರಿಗಳು ಸಕಾಲಕ್ಕೆ ತೆರಳಿ ಅದರ ಜೀವ ಉಳಿಸಿದ್ದಾರೆ.
ನಗರ-ಗುಂಡ್ಲುಪೇಟೆ ಮಾರ್ಗದಲ್ಲಿ ಬಣ್ಣಾರಿ ಅಮ್ಮಾನ್ ದೇವಸ್ಥಾನ ಇದ್ದು ಅದರ ಎದುರು ಇರುವ ಕರಿಕಲ್ಲು ಕ್ವಾರಿ ಬಳಿಯ ಹಳ್ಳದಲ್ಲಿ ಚಿರತೆ ಉರುಳಿಗೆ ಸಿಲುಕಿದ್ದು ಗೊತ್ತಾಗಿ ಮಧ್ಯಾಹ್ನ ರಕ್ಷಣೆ ಮಾಡಲಾಗಿದೆ.
ಮೇಲ್ನೋಟಕ್ಕೆ ಹಂದಿಗೆ ಹಾಕಿದ್ದ ಉರುಳಿನಂತೆ ಕಾಣುತ್ತದೆಯಾದರೂ ಇದು ಪ್ರಾಣಿಗಳ ಬೇಟೆಯಾಡುವ ಉದ್ದೇಶದಿಂದ ನುರಿತವರು ಎಸಗಿರುವ ಕೃತ್ಯವೇ ಎಂಬುದರ ಬಗ್ಗೆಯೂ ಇಲಾಖೆ ಗಂಭೀರವಾಗಿ ಪರಿಶೀಲನೆ ನಡೆಸುತ್ತಿದೆ.
ಬಿ ಆರ್ ಟಿ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್, ಎಸಿಎಫ್ ಸುರೇಶ್ , ಆರ್ ಎಫ್ ಒ ವಿನೋದ್ ಗೌಡ ಮತ್ತು ಸಿಬ್ಬಂದಿ ವೈದ್ಯರಾದ ಮುಜೀಬ್,ವಸೀಂ ಅವರೊಂದಿಗೆ ಧಾವಿಸಿಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸಿದರು.ನಂತರ ಅದರ ದೇಹ ಪರಿಶೀಲಿಸಿದಾಗ ಯಾವುದೇ ಗಾಯಗಳಾಗಿರಲಿಲ್ಲ.
ಈ ಚಿರತೆಯನ್ನು ಮತ್ತೆ ಕಾಡಿಗೆ ಬಿಡಬೇಕೆ ಅಥವಾ ಮೈಸೂರು ಮೃಗಾಲಯಕ್ಕೆ ಕೊಂಡೊಯ್ಯಬೇಕೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಈ ವಿಚಾರವಾಗಿ ಹಿರಿಯ ಅಧಿಕಾರಿಗಳು ಹೇಗೆ ಹೇಳುತ್ತಾರೆ ಹಾಗೆ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪ್ರಜ್ಞೆ ಬಂದ ನಂತರ ಚಿರತೆಯನ್ನುನಲ್ಲೂರು ಅರಣ್ಯ ಕಚೇರಿಯಲ್ಲಿ ಬೋನಿನಲ್ಲಿ ಇರಿಸಲಾಗಿತ್ತು.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

10 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

12 hours ago