ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ
ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್ಬಿಐ) ಆವರಣದಲ್ಲಿ ಚಿರತೆಯ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.
ಆರ್ ಬಿ ಐ ಕ್ಯಾಂಪಸ್ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಈ ಹಿಂದೆ ಬೆಮೆಲ್ ಕ್ಯಾಂಪಸ್, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.
ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ. ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…