ಜಿಲ್ಲೆಗಳು

ಸಿಎಫ್‌ಟಿಆರ್‌ಐ ಕ್ಯಾಂಪಸ್ಸಿನಲ್ಲಿ ಚಿರತೆ ಪ್ರತ್ಯಕ್ಷ

ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ

ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್‌ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ.

ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ರಾತ್ರಿ ಚಿರತೆ ಓಡಾಡಿರುವುದನ್ನು ಸಂಸ್ಥೆಯ ಕಾವಲು ಸಿಬ್ಬಂದಿ ಗಮನಿಸಿದ್ದು, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ತಕ್ಷಣ ಕಾರ್ಯ ಪ್ರವೃತ್ತವಾಗಿದ್ದು 10 ಮಂದಿ ಸಿಬ್ಬಂದಿಗಳನ್ನು ಚಿರತೆ ಜಾಡು ಪತ್ತೆಗೆ ನೇಮಿಸಲಾಗಿದೆ. ಸದ್ಯ ಕ್ಯಾಂಪಸ್ಸಿನಲ್ಲಿ ಒಂದು ಬೋನು ಇಡಲಾಗಿದೆ. ಅಗತ್ಯ ಬಿದ್ದರೆ ಮತ್ತೊಂದು ಬೋನು ಇಡಲಾಗುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಂಪಸ್‌ ನಲ್ಲಿ ಸದ್ಯ ರಾತ್ರಿ ದೃಶ್ಯಗಳನ್ನು ಸೆರೆ ಹಿಡಿಯುವ ಸಿಸಿ ಕೆಮೆರಾ ಗಳಿಲ್ಲ. ಇದಕ್ಕಾಗಿ ತಕ್ಷಣವೇ ನಾಲ್ಕು ನೈಟ್ ಕ್ಯಾಪ್ಚರಿಂಗ್‌ ಸಿಸಿ ಕೆಮೆರಾ ಅಳವಡಿಸಲಾಗುತ್ತಿದೆ. ಸಿಎಫ್‌ ಟಿಆರ್ ಐ ಕ್ಯಾಂಪಸ್ ನಲ್ಲಿ ಇರುವ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಅಧಿಕಾರಿಗಳು ಆಂದೋಲನಕ್ಕೆ ಮಾಹಿತಿ ನೀಡಿದ್ದಾರೆ.

ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್‌ಬಿಐ) ಆವರಣದಲ್ಲಿ ಚಿರತೆಯ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಆರ್‌ ಬಿ ಐ ಕ್ಯಾಂಪಸ್‌ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಈ ಹಿಂದೆ ಬೆಮೆಲ್‌ ಕ್ಯಾಂಪಸ್‌, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.

ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ. ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

andolanait

Recent Posts

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

4 mins ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

16 mins ago

ಮಹಾರಾಷ್ಟ್ರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಸಾವು

ಪಾಲ್ಘಾರ್:‌ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪಾಲ್ಘಾರ್‌ ಜಿಲ್ಲೆಯ ವಾಡಾ ತಾಲ್ಲೂಕಿನಲ್ಲಿ…

51 mins ago

ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಒಬ್ಬ ಭಯೋತ್ಪಾದಕ ಎಂದು ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.…

1 hour ago

ಗಜಪಡೆಗೂ ತಟ್ಟಿದ ಬಿಸಿಲ ಬೇಗೆ: ನೀರನ್ನರಸಿ ನಿತ್ಯ ದಂಡಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲಿನ ಝಳಕ್ಕೆ ಮನುಷ್ಯರು ಬಸವಳಿದಂತೆ ವನ್ಯಜೀವಿಗಳು ಕಂಗಲಾಗಿವೆ. ಅದರಂತೆ, ಬಿಸಿಲಿನ…

1 hour ago

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಗುಂಡ್ಲುಪೇಟೆ: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್…

2 hours ago