ಮೈಸೂರು ನಗರದ ಹೊರವಲಯದಲ್ಲಿದ್ದ ಚಿರತೆ ಈಗ ನಗರದೊಳಗೇ ಕಾಣಿಸಿಕೊಂಡು ಆತಂಕ
ಮೈಸೂರು: ನಗರದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ನಗರದೊಳಗೆ ಬಂದಿದೆ. ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಎರಡು ಚಿರತೆ ಕಾಣಿಸಿಕೊಂಡಿವೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್ಬಿಐ) ಆವರಣದಲ್ಲಿ ಚಿರತೆಯ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.
ಆರ್ ಬಿ ಐ ಕ್ಯಾಂಪಸ್ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಪತ್ತೆಯಾಗಿರಲಿಲ್ಲ. ಈ ಹಿಂದೆ ಬೆಮೆಲ್ ಕ್ಯಾಂಪಸ್, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.
ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ಭಯ ಪಡುವ ಅಗತ್ಯವಿಲ್ಲ. ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…