ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ.
ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುವಾಗ ತೋಟದಿಂದ ರಸ್ತೆ ದಾಟುತ್ತಿದ್ದ ಚಿರತೆಯನ್ನು ನೋಡಿ ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಕಂಡುಬಂದಾಗಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಭಯದ ವಾತಾವರಣದಲ್ಲಿ ನಿದ್ದೆಗೆಡುವಂತಾಗಿದೆ. ಇದಲ್ಲದೆ ಚಿರತೆ ಹಸುಗಳ ರಾಸು ಹೋಗುವಾಗ ಚಿರತೆ ಎರಗಲು ಮುಂದಾಗುತ್ತಿದ್ದು ಸ್ಥಳದಲ್ಲಿದ್ದ ಗ್ರಾಮದವರು ಜೋರಾಗಿ ಕೂಗಿಕೊಂಡಾಗ ಚಿರತೆ ವಾಪಾಸ್ಸು ತೋಟದತ್ತ ಓಡಿ ಹೋಗಿವೆ. ನಂತರ ಭಯಗೊಂಡು ಊರಿಗೆ ಬಂದು ಮಾಹಿತಿ ನೀಡಿದ್ದಾರೆ.ಸಾಯಂಕಾಲದ ವೇಳೆಯಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗಲು ಭಯ ಪಡುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ರಾಜೇಶ್ ಎಂಬುವವರು ಹೆಬ್ಬಲಗುಪ್ಪೆ ಹಾಗೂ ಜಕ್ಕಹಳ್ಳಿ ಗ್ರಾಮದ ಸುತ್ತಮುತ್ತ ಇರುವ ಜಮೀನಿನ ಭಾಗದಲ್ಲಿ ಚಿರತೆಯು ಬಂದಿರುವುದು ಖಚಿತವಾಗಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…