ಮೈಸೂರು : ಸರಗೂರು ಸಮೀಪದ ಹೆಬ್ಬಲಗುಪ್ಪೆ ಗ್ರಾಮಕ್ಕೆ ರಸ್ತೆ ಬದಿಯಲ್ಲಿ ಕಳೆದ ವಾರದ ಹಿಂದೆ ಚಿರತೆೊಂಂದು ಪ್ರತ್ಯಕ್ಷವಾಗಿದ್ದು, ಅದನ್ನು ಕಂಡು ಗ್ರಾಮಸ್ತರು ಭಯಭೀತರಾಗಿದ್ದಾರೆ.
ಜಕ್ಕಹಳ್ಳಿ ಗ್ರಾಮದಿಂದ ಹೆಬ್ಬಲಗುಪ್ಪೆ ಗ್ರಾಮಕ್ಕೆ ಹೋಗುವಾಗ ಇಂದು ಸಂಜೆ 6.40 ರಲ್ಲಿ ಕೆಲಸ ಮುಗಿಸಿ ಮನೆಯತ್ತ ನಡೆದುಕೊಂಡು ಹೋಗುವಾಗ ತೋಟದಿಂದ ರಸ್ತೆ ದಾಟುತ್ತಿದ್ದ ಚಿರತೆಯನ್ನು ನೋಡಿ ಅಲ್ಲಿನ ಗ್ರಾಮಸ್ಥರು ಗಾಬರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಚಿರತೆ ಕಂಡುಬಂದಾಗಿನಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಭಯದ ವಾತಾವರಣದಲ್ಲಿ ನಿದ್ದೆಗೆಡುವಂತಾಗಿದೆ. ಇದಲ್ಲದೆ ಚಿರತೆ ಹಸುಗಳ ರಾಸು ಹೋಗುವಾಗ ಚಿರತೆ ಎರಗಲು ಮುಂದಾಗುತ್ತಿದ್ದು ಸ್ಥಳದಲ್ಲಿದ್ದ ಗ್ರಾಮದವರು ಜೋರಾಗಿ ಕೂಗಿಕೊಂಡಾಗ ಚಿರತೆ ವಾಪಾಸ್ಸು ತೋಟದತ್ತ ಓಡಿ ಹೋಗಿವೆ. ನಂತರ ಭಯಗೊಂಡು ಊರಿಗೆ ಬಂದು ಮಾಹಿತಿ ನೀಡಿದ್ದಾರೆ.ಸಾಯಂಕಾಲದ ವೇಳೆಯಲ್ಲಿ ಕೆಲಸ ಮುಗಿಸಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗಲು ಭಯ ಪಡುತ್ತಿದ್ದಾರೆ.ಈ ಕುರಿತು ಮಾಹಿತಿ ನೀಡಿದ ಪ್ರತ್ಯಕ್ಷದರ್ಶಿ ರಾಜೇಶ್ ಎಂಬುವವರು ಹೆಬ್ಬಲಗುಪ್ಪೆ ಹಾಗೂ ಜಕ್ಕಹಳ್ಳಿ ಗ್ರಾಮದ ಸುತ್ತಮುತ್ತ ಇರುವ ಜಮೀನಿನ ಭಾಗದಲ್ಲಿ ಚಿರತೆಯು ಬಂದಿರುವುದು ಖಚಿತವಾಗಿದೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…