ಶ್ರೀರಂಗಪಟ್ಟಣ: ತಾಲ್ಲೂಕಿನ ಟಿ.ಎಂ.ಹೊಸೂರು ಗೇಟ್ ಬಳಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳದಲ್ಲಿದ್ದವರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ಸಂಜೆ ನಡೆದಿದೆ.
ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡಂತೆ ಟಿ.ಎಂ.ಹೊಸೂರು ರಸ್ತೆಯಲ್ಲಿರುವ ಕರಿಘಟ್ಟ ನಾಲೆಯ ಸೇತುವೆ ಮೇಲೆ ಚಿರತೆ ಹಾದು ಹೋಗಿದೆ. ಗರುಡನ ಉಕ್ಕಡ ಕಡೆಯ ಅರಣ್ಯದ ಕಡೆಗೆ ದಪ್ಪ ಗಾತ್ರದ ಚಿರತೆ ಸಾಗಿತು ಎಂದು ಪ್ರತ್ಯಕ್ಷದರ್ಶಿ ಟಿ.ಎಂ.ಹೊಸೂರು ಗ್ರಾಮಸ್ಥರು ತಿಳಿಸಿದ್ದಾರೆ. ಟಿ.ಎಂ.ಹೊಸೂರು ಗೇಟ್ ಬಳಿ ಮೇಲಿಂದ ಮೇಲೆ ಚಿರತೆ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಇಲ್ಲಿಯ ಜನರು ಕೂಡ ಚಿರತೆಗೆ ಹೆದರಿ ರಸ್ತೆಯಲ್ಲಿ ಓಡಾಡುವುದಕ್ಕೆ ಭಯ ಪಡುತ್ತಿದ್ದಾರೆ. ಹಾಗಾಗಿ ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಬೇಕೆಂದು ಗ್ರಾಮದ ಜನರು ಒತ್ತಾಯಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…