ಜಿಲ್ಲೆಗಳು

ಮೈಸೂರಿನಲ್ಲಿ ಮತ್ತೆ ಚಿರತೆ ಸದ್ದು, ಆರ್‌ಎಂಪಿ ಬಳಿ ಚಿರತೆ ಸೆರೆ

ಸಿಎಫ್‌ಟಿಆರ್‌ಐ ಕ್ಯಾಂಪಸ್‌ ನಲ್ಲಿ ಚಿರತೆ ಕಾಣಿಸಿಕೊಂಡ ಆತಂಕ, ಶಾಲೆಗೆ ರಜೆ

ಮೈಸೂರು: ಜಿಲ್ಲೆಯಲ್ಲಿ ಚಿರತೆಗಳ ಸದ್ದು ಮುಂದುವರಿದಿದೆ. ನಗರದ ಇಲವಾಲದ ಬಳಿ ಇರುವ ಆರ್‌ಎಂಪಿ ಘಟಕದ ಬಳಿ ಮಂಗಳವಾರ ರಾತ್ರಿ ಚಿರತೆಯೊಂದು ಬೋನಿಗೆ ಬಿದ್ದಿದೆ. ಇದೇ ವೇಳೆ ನಗರದ ಸಿಎಫ್ ಟಿಆರ್ ಐ ಕ್ಯಾಂಪಸ್‌ ನಲ್ಲಿ ಮಂಗಳವಾರ ರಾತ್ರಿ 1 ಗಂಟೆ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಇಲವಾಲ ಭಾಗದಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಆರ್‌ ಎಂಪಿ ಘಟಕ ಸೇರಿದಂತೆ ನಾನಾ ಭಾಗಗಳಲ್ಲಿ ಬೋನು ಇರಿಸಲಾಗಿತ್ತು. ಮಂಗಳವಾರ ರಾತ್ರಿ ಚಿರತೆ ಬೋನಿಗೆ ಬಿದ್ದಿದೆ.

ಐದರಿಂದ ಆರು ವರ್ಷದ ಗಂಡು ಚಿರತೆ ಇದಾಗಿದ್ದು, ಚಿರತೆಯನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಿದ ಬಳಿಕ ಕಾಡಿಗೆ ಬಿಡಲಾಗುವುದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್‌ ಆಂದೋಲನ ಡಿಜಿಟಲ್‌ ಗೆ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯೊಂದರಲ್ಲಿಯೇ ಕಳೆದ ಮೂರು ವಾರಗಳಲ್ಲಿ  ಸೆರೆಸಿಕ್ಕ 9ನೇ ಚಿರತೆ ಇದಾಗಿದೆ.

ಇದೇ ವೇಳೆ ಕೇಂದ್ರೀಯ ಆಹಾರ ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆವರಣದಲ್ಲಿ ಮಂಗಳವಾರ ರಾತ್ರಿ ಚಿರತೆ ಕಾಣಿಸಿಕೊಂಡಿರುವ ವಿಚಾರ ಸಿಎಫ್‌ ಟಿ ಆರ್‌ ಐ ಸಿಬ್ಬಂದಿ ಮತ್ತು ಶಾಲಾ ಮಕ್ಕಳಲ್ಲಿ ಬುಧವಾರ ಆತಂಕಕ್ಕೆ ಕಾರಣವಾಯಿತು. ಚಿರತೆ ಕಾಣಿಸಿಕೊಂಡ ಸುದ್ದಿ ಹಿನ್ನೆಲೆಯಲ್ಲಿ ಸಿಎಫ್‌ ಟಿಆರ್ ಐ ಕ್ಯಾಂಪಸ್ ನಲ್ಲಿರುವ ಒಂದರಿಂದ 12 ತರಗತಿ ಮಕ್ಕಳಿಗೆ ರಜೆ ಘೋಷಿಸಲಾಯಿತು. ಪೋಷಕರು ಆತಂಕದಲ್ಲಿಯೇ ಬಂದು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ದರು.

ಚಿರತೆಯ ಓಡಾಟವನ್ನು ಸಂಸ್ಥೆಯ ಕಾವಲು ಸಿಬ್ಬಂದಿ ಪ್ರಭಾಕರ್‌ ಎಂಬವರು ಗಮನಿಸಿ ಸಿಎಫ್‌ಟಿಆರ್‌ಐ ನಿರ್ದೇಶಕರಿಗೆ ತಿಳಿಸಿದ್ದು ಅವರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರೆನ್ನಲಾಗಿದೆ.

ಅರಣ್ಯ ಇಲಾಖೆ ಬುಧವಾರ ಬೆಳಗ್ಗಿನಿಂದಲೇ ಕಾರ್ಯ ಪ್ರವೃತ್ತವಾಗಿದ್ದು 10 ಮಂದಿ ಸಿಬ್ಬಂದಿಗಳನ್ನು ಚಿರತೆ ಜಾಡು ಪತ್ತೆಗೆ ನೇಮಿಸಲಾಯಿತು. ಆದರೆ ಚಿರತೆಯ ಹೆಜ್ಜೆ ಗುರುತು ಎಲ್ಲೂ ಪತ್ತೆಯಾಗಿಲ್ಲ. ಕ್ಯಾಂಪಸ್‌ ನಲ್ಲಿರುವ ಪಾಳು ಬಿದ್ದ ಸುಮಾರು 60 ಕ್ವಾರ್ಟರ್ಸ್‌ ನಲ್ಲೂ ಶೋಧ ನಡೆಸಲಾಯಿತು. ಆದರೆ ಎಲ್ಲೂ ಚಿರತೆಯ ಕುರುಹು ಕಂಡು ಬಂದಿಲ್ಲ.

ಸದ್ಯ ಕ್ಯಾಂಪಸ್ಸಿನಲ್ಲಿ ಒಂದು ಬೋನು ಇಡಲಾಗಿದೆ. ಅಗತ್ಯ ಬಿದ್ದರೆ ಮತ್ತೊಂದು ಬೋನು ಇಡಲಾಗುತ್ತದೆ. ಕ್ಯಾಂಪಸ್‌ ನಲ್ಲಿ ರಾತ್ರಿ ದೃಶ್ಯಗಳನ್ನು ಸೆರೆ ಹಿಡಿಯುವ ಸಿಸಿ ಕೆಮೆರಾ ಗಳಿಲ್ಲ. ಇದಕ್ಕಾಗಿ ತಕ್ಷಣವೇ ನಾಲ್ಕು ನೈಟ್ ಕ್ಯಾಪ್ಚರಿಂಗ್‌ ಸಿಸಿ ಕೆಮೆರಾ ಅಳವಡಿಸಲಾಗುತ್ತಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲಕ್ಷ್ಮೀಕಾಂತ್‌ ಆಂದೋಲನ ಡಿಜಿಟಲ್‌ ಗೆ ತಿಳಿಸಿದ್ದಾರೆ. ನಾಳೆಯಿಂದ ಎಂದಿನಂತೆ ಶಾಲೆ ನಡೆಯಲಿದೆ. ಚಿರತೆಯ ಬಗ್ಗೆ ಭಯ ಬೇಕಾಗಿಲ್ಲ ಎಂದವರು ತಿಳಿಸಿದ್ದಾರೆ.

ಕಳೆದ ಸೆಪ್ಟೆಂಬರ್‌ ತಿಂಗಳಿನಲ್ಲಿ ಮೇಟಗಳ್ಳಿಯಲ್ಲಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ (ಆರ್‌ಬಿಐ) ಆವರಣದಲ್ಲಿ ಚಿರತೆಯು ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಚಿರತೆಯ ಕಾರಣಕ್ಕೆ ಆರ್ ಬಿ ಐ ಸನಿಹದ ಕೇಂದ್ರೀಯ ವಿದ್ಯಾಲಯಕ್ಕೆ ಸೆಪ್ಟೆಂಬರ್ 1 ರಿಂದ ಸುಮಾರು ಎರಡು ವಾರ ರಜೆ ಘೋಷಣೆ ಮಾಡಲಾಗಿತ್ತು. ಆದರೆ ಮರಿಗಳೊಂದಿಗೆ ಕಾಣಿಸಿಕೊಂಡಿದ್ದ ಚಿರತೆ ಸಿಸಿಟಿವಿಯಲ್ಲಿ ಕಾಣಿಸಿಕೊಂಡಿದ್ದನ್ನು ಬಿಟ್ಟರೆ ಬಹಿರಂಗವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.

ಆರ್‌ ಬಿ ಐ ಕ್ಯಾಂಪಸ್‌ ನ ಮೂರು ಪ್ರತ್ಯೇಕ ಸ್ಥಳಗಳಲ್ಲಿ ಬೋನುಗಳನ್ನು ಇರಿಸಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗಿತ್ತಾದರೂ ಚಿರತೆ ಬಲೆಗೆ ಬಿದ್ದಿರಲಿಲ್ಲ. ಈ ಹಿಂದೆ ಬೆಮೆಲ್‌ ಕ್ಯಾಂಪಸ್‌, ಗೋಕುಲಂ, ಹೆಬ್ಬಾಳ, ಚಾಮುಂಡಿ ಬೆಟ್ಟ, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲೂ ಚಿರತೆ ಕಾಣಿಸಿಕೊಂಡಿತ್ತು.

ನಾಗರ ಹೊಳೆ, ಬಂಡೀಪುರ ಅಭಯಾರಣ್ಯಗಳು ಮೈಸೂರಿಗೆ ಸನಿಹದಲ್ಲಿವೆ. ಚಾಮುಂಡಿ ಬೆಟ್ಟವೂ ಸನಿಹದಲ್ಲೇ ಇರುವುದರಿಂದ ಆಗಾಗ್ಗೆ ಮೈಸೂರಿನ ಜನ ವಸತಿ ಪ್ರದೇಶಗಳತ್ತ ಚಿರತೆಗಳು ಬರುವುದು ಸಾಮಾನ್ಯ. ಆಹಾರ ಹುಡುಕಿಕೊಂಡು ಬರುವ ಚಿರತೆಗಳು ಒಂದೇ ಕಡೆ ನೆಲೆ ನಿಲ್ಲುವುದಿಲ್ಲ. ಸಾಮಾನ್ಯವಾಗಿ ರಾತ್ರಿ ವೇಳೆ ಸಂಚರಿಸುತ್ತವೆ. ಹಗಲು ಹೊತ್ತಿನಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಹಾಗಾಗಿ ಜನರು ರಾತ್ರಿ ವೇಳೆ ಓಡಾಡುವಾಗ ಎಚ್ಚರಿಕೆಯಿಂದ ಇದ್ದರೆ ಸಾಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

41 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago