ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ.
ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ ರಸ್ತೆ ಬದಿಯ ಜೋಳದ ಕಡ್ಡಿಗಳ ನಡುವಿನ ಪೊದೆಯೊಳಗೆ ಮಲಗಿ ಚಿರತೆ ಗುಟುರು ಶಬ್ದ ಕೇಳಿ ಬಂದಿದೆ. ಇದಾದ ಬಳಿಕೆ ಕೆಲ ನಿಮಿಷಗಳಲ್ಲಿ ತಮ್ಮ ಸ್ನೇಹಿತರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಎಲ್ಲರೂ ಬಂದು ಚಿರತೆ ಇದ್ದ ಸ್ಥಳದಲ್ಲಿ ನಿಂತು ಅದರ ಶಬ್ಧವನ್ನು ಮೊಬೈಲ್ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದು, ಆ ಆಡಿಯೋ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ದುಗ್ಗಳ್ಳಿ ಮತ್ತು ಶೆಟ್ಟಿಹಳ್ಳಿ ರಸ್ತೆಯಲ್ಲಿ ಆಟೋ ಚಾಲಕನಿಗೆ ಹುಲಿ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದಾದ ಬಳಿಕ ಚಿರತೆಯ ಸದ್ದು ಕೇಳಿ ಬಂದಿರುವುದು ಮತ್ತಷ್ಟು ಭಯಗೊಳಿಸಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಸಪ್ನ ಬುಕ್ಹೌಸ್ ಉತ್ಪನ್ನಗಳಿಗೆ ರಿಯಾಯಿತಿ
Next Article ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ