ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ.
ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ ರಸ್ತೆ ಬದಿಯ ಜೋಳದ ಕಡ್ಡಿಗಳ ನಡುವಿನ ಪೊದೆಯೊಳಗೆ ಮಲಗಿ ಚಿರತೆ ಗುಟುರು ಶಬ್ದ ಕೇಳಿ ಬಂದಿದೆ. ಇದಾದ ಬಳಿಕೆ ಕೆಲ ನಿಮಿಷಗಳಲ್ಲಿ ತಮ್ಮ ಸ್ನೇಹಿತರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಎಲ್ಲರೂ ಬಂದು ಚಿರತೆ ಇದ್ದ ಸ್ಥಳದಲ್ಲಿ ನಿಂತು ಅದರ ಶಬ್ಧವನ್ನು ಮೊಬೈಲ್ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದು, ಆ ಆಡಿಯೋ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ದುಗ್ಗಳ್ಳಿ ಮತ್ತು ಶೆಟ್ಟಿಹಳ್ಳಿ ರಸ್ತೆಯಲ್ಲಿ ಆಟೋ ಚಾಲಕನಿಗೆ ಹುಲಿ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದಾದ ಬಳಿಕ ಚಿರತೆಯ ಸದ್ದು ಕೇಳಿ ಬಂದಿರುವುದು ಮತ್ತಷ್ಟು ಭಯಗೊಳಿಸಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…