ಜಿಲ್ಲೆಗಳು

ಹುಲ್ಲಹಳ್ಳಿ-ಕಾರ್ಯ ಮುಖ್ಯರಸ್ತೆಯಲ್ಲಿ ಚಿರತೆ ಪತ್ತೆ

ಹುಲ್ಲಹಳ್ಳಿ: ಹುಲ್ಲಹಳ್ಳಿ ಮತ್ತು ಕಾರ್ಯಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಾರ್ವಜನಿಕರು ಮತ್ತು ರೈತರಲ್ಲಿ ಆತಂಕ ಮೂಡಿಸಿದೆ.
ಮಂಗಳವಾರ 8ಗಂಟೆಯಲ್ಲಿ ವಾಯುವಿಹಾರಕ್ಕೆ ತೆರಳಿದ ಚಂದ್ರು ಎಂಬವರಿಗೆ ರಸ್ತೆ ಬದಿಯ ಜೋಳದ ಕಡ್ಡಿಗಳ ನಡುವಿನ ಪೊದೆಯೊಳಗೆ ಮಲಗಿ ಚಿರತೆ ಗುಟುರು ಶಬ್ದ ಕೇಳಿ ಬಂದಿದೆ. ಇದಾದ ಬಳಿಕೆ ಕೆಲ ನಿಮಿಷಗಳಲ್ಲಿ ತಮ್ಮ ಸ್ನೇಹಿತರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಎಲ್ಲರೂ ಬಂದು ಚಿರತೆ ಇದ್ದ ಸ್ಥಳದಲ್ಲಿ ನಿಂತು ಅದರ ಶಬ್ಧವನ್ನು ಮೊಬೈಲ್‌ನಲ್ಲಿ ರೆಕಾರ್ಡಿಂಗ್ ಮಾಡಿಕೊಂಡಿದ್ದು, ಆ ಆಡಿಯೋ ವೈರಲ್ ಆಗಿದೆ.
ಕೆಲ ದಿನಗಳ ಹಿಂದೆ ದುಗ್ಗಳ್ಳಿ ಮತ್ತು ಶೆಟ್ಟಿಹಳ್ಳಿ ರಸ್ತೆಯಲ್ಲಿ ಆಟೋ ಚಾಲಕನಿಗೆ ಹುಲಿ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಇದಾದ ಬಳಿಕ ಚಿರತೆಯ ಸದ್ದು ಕೇಳಿ ಬಂದಿರುವುದು ಮತ್ತಷ್ಟು ಭಯಗೊಳಿಸಿದೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದರು ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.
ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

41 mins ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

43 mins ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

45 mins ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

48 mins ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

56 mins ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

1 hour ago