ಕಂಚಮಲ್ಲಿ ಗೇಟ್ ಸ್ವಾಗತ ಕಮಾನು ಸಮೀಪ ತಡರಾತ್ರಿ ಚಿರತೆ ಪತ್ತೆ
ಮೈಸೂರು: ಜಿಲ್ಲೆಯಾದ್ಯಂತ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯೇಕ್ಷವಾಗುತ್ತಿದ್ದು, ಇದೀಗ ಮೈಸೂರು ಮಾನಂದವಾಡಿ ರಸ್ತೆಯ ಕಂಚಮಳ್ಳಿ ಗೇಟ್ ಸಮೀಪ ಇರುವ ಸ್ವಾಗತ ಕಮಾನು ಬಳಿ ಚಿರತೆ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಶನಿವಾರ ರಾತ್ರಿ 1ಗಂಟೆ 15 ನಿಮಿಷಕ್ಕೆ ಚಿರತೆ ಕಾಣಿಸಿಕೊಂಡಿದೆ. ಹಂಪಾಪುರದ ಗ್ರಾಮಸ್ಥರೊಬ್ಬರು ರಾತ್ರಿ ತಮ್ಮ ಕೆಲಸ ಮುಗಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಚಿರತೆಯೊಂದು ಹೋಗುತ್ತಿದ್ದನ್ನು ನೋಡಿದ್ದಾರೆ. ನಾಯಿಯೊಂದು ರಸ್ತೆ ದಾಟುತ್ತಿದೆ ಎಂದು ಸಮೀಪ ಹೋಗುತ್ತಿದ್ದಾಗ ಹಾಗೆ ಚಿರತೆ ಬೈಕ್ ಹಾರನ್ ಶಬ್ಧಕ್ಕೆ ಓಡಿಹೋಯಿತು ಎಂದು ಹೇಳಿದ್ದಾರೆ.
ಈ ಹಿಂದೆಯು ಹಂಪಾಪುರ ಗ್ರಾಮದಲ್ಲಿ ಮನೆ ಹಿಂಭಾಗ ಚಿರತೆ ಬಂದು ಹೋಗಿದ್ದ ಗುರುತು ಸಿಕ್ಕಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ಭಯದಿಂದ ಸ್ಥಳೀಯ ನಿವಾಸಿಗಳು, ಬಹುತೇಕ ರೈತರು ತಮ್ಮ ಜಮೀನಿನಲ್ಲಿ ಉಳಿದುಕೊಳ್ಳಲು ಹಾಗೂ ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ.
ಇಲಾಖೆಯವರು ಚಿರತೆಯನ್ನು ಹಿಡಿದು ಅರಣ್ಯಕ್ಕೆ ಸ್ಥಳಾಂತರಿಸಬೇಕು ಎಂಬುದು ಆಗ್ರಹಿಸಿದ್ದಾರೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…