ಕಂಚಮಲ್ಲಿ ಗೇಟ್ ಸ್ವಾಗತ ಕಮಾನು ಸಮೀಪ ತಡರಾತ್ರಿ ಚಿರತೆ ಪತ್ತೆ
ಮೈಸೂರು: ಜಿಲ್ಲೆಯಾದ್ಯಂತ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯೇಕ್ಷವಾಗುತ್ತಿದ್ದು, ಇದೀಗ ಮೈಸೂರು ಮಾನಂದವಾಡಿ ರಸ್ತೆಯ ಕಂಚಮಳ್ಳಿ ಗೇಟ್ ಸಮೀಪ ಇರುವ ಸ್ವಾಗತ ಕಮಾನು ಬಳಿ ಚಿರತೆ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಶನಿವಾರ ರಾತ್ರಿ 1ಗಂಟೆ 15 ನಿಮಿಷಕ್ಕೆ ಚಿರತೆ ಕಾಣಿಸಿಕೊಂಡಿದೆ. ಹಂಪಾಪುರದ ಗ್ರಾಮಸ್ಥರೊಬ್ಬರು ರಾತ್ರಿ ತಮ್ಮ ಕೆಲಸ ಮುಗಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಚಿರತೆಯೊಂದು ಹೋಗುತ್ತಿದ್ದನ್ನು ನೋಡಿದ್ದಾರೆ. ನಾಯಿಯೊಂದು ರಸ್ತೆ ದಾಟುತ್ತಿದೆ ಎಂದು ಸಮೀಪ ಹೋಗುತ್ತಿದ್ದಾಗ ಹಾಗೆ ಚಿರತೆ ಬೈಕ್ ಹಾರನ್ ಶಬ್ಧಕ್ಕೆ ಓಡಿಹೋಯಿತು ಎಂದು ಹೇಳಿದ್ದಾರೆ.
ಈ ಹಿಂದೆಯು ಹಂಪಾಪುರ ಗ್ರಾಮದಲ್ಲಿ ಮನೆ ಹಿಂಭಾಗ ಚಿರತೆ ಬಂದು ಹೋಗಿದ್ದ ಗುರುತು ಸಿಕ್ಕಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ಭಯದಿಂದ ಸ್ಥಳೀಯ ನಿವಾಸಿಗಳು, ಬಹುತೇಕ ರೈತರು ತಮ್ಮ ಜಮೀನಿನಲ್ಲಿ ಉಳಿದುಕೊಳ್ಳಲು ಹಾಗೂ ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ.
ಇಲಾಖೆಯವರು ಚಿರತೆಯನ್ನು ಹಿಡಿದು ಅರಣ್ಯಕ್ಕೆ ಸ್ಥಳಾಂತರಿಸಬೇಕು ಎಂಬುದು ಆಗ್ರಹಿಸಿದ್ದಾರೆ.
ನವದೆಹಲಿ: ಕೋಗಿಲು ಲೇಔಟ್ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…
ಗುಂಡ್ಲುಪೇಟೆ: ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಕಾಣಿಸಿಕೊಂಡಿ ಕಾಡುಬೆಕ್ಕನ್ನು ಅರಣ್ಯಾಧಿಕಾರಿಗಳು ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತಾಲ್ಲೂಕಿನ ಬರಗಿ ಗ್ರಾಮದಲ್ಲಿ…
ಗುಂಡ್ಲುಪೇಟೆ: ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಬೆಟ್ಟದಮಾದಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಂಕರ್ ಎಂಬುವವರು ತಮಗೆ ಸೇರಿದ…
ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಚಿತ್ರದುರ್ಗ: ಚಿತ್ರದುರ್ಗ ಬಸ್ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 8ಕ್ಕೇ ಏರಿಕೆಯಾಗಿದೆ. ಮೃತರನ್ನು…
ಮಂಡ್ಯ: ದೇಶದ ಗ್ರಾಮೀಣ ಭಾಗದ ಜನರ ಜೀವನಾಡಿ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಬಿ ಜೀ ರಾಮ್…