ಜಿಲ್ಲೆಗಳು

ಮೈಸೂರು – ಮಾನಂದವಾಡಿ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ

ಕಂಚಮಲ್ಲಿ ಗೇಟ್ ಸ್ವಾಗತ ಕಮಾನು ಸಮೀಪ ತಡರಾತ್ರಿ ಚಿರತೆ ಪತ್ತೆ

ಮೈಸೂರು: ಜಿಲ್ಲೆಯಾದ್ಯಂತ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯೇಕ್ಷವಾಗುತ್ತಿದ್ದು, ಇದೀಗ ಮೈಸೂರು ಮಾನಂದವಾಡಿ ರಸ್ತೆಯ ಕಂಚಮಳ್ಳಿ ಗೇಟ್ ಸಮೀಪ ಇರುವ ಸ್ವಾಗತ ಕಮಾನು ಬಳಿ ಚಿರತೆ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಶನಿವಾರ ರಾತ್ರಿ 1ಗಂಟೆ 15 ನಿಮಿಷಕ್ಕೆ ಚಿರತೆ ಕಾಣಿಸಿಕೊಂಡಿದೆ. ಹಂಪಾಪುರದ ಗ್ರಾಮಸ್ಥರೊಬ್ಬರು ರಾತ್ರಿ ತಮ್ಮ ಕೆಲಸ ಮುಗಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಚಿರತೆಯೊಂದು ಹೋಗುತ್ತಿದ್ದನ್ನು ನೋಡಿದ್ದಾರೆ. ನಾಯಿಯೊಂದು ರಸ್ತೆ ದಾಟುತ್ತಿದೆ ಎಂದು ಸಮೀಪ ಹೋಗುತ್ತಿದ್ದಾಗ ಹಾಗೆ ಚಿರತೆ ಬೈಕ್ ಹಾರನ್ ಶಬ್ಧಕ್ಕೆ ಓಡಿಹೋಯಿತು ಎಂದು ಹೇಳಿದ್ದಾರೆ‌.

ಈ ಹಿಂದೆಯು ಹಂಪಾಪುರ ಗ್ರಾಮದಲ್ಲಿ ಮನೆ ಹಿಂಭಾಗ ಚಿರತೆ ಬಂದು ಹೋಗಿದ್ದ ಗುರುತು ಸಿಕ್ಕಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ಭಯದಿಂದ ಸ್ಥಳೀಯ ನಿವಾಸಿಗಳು, ಬಹುತೇಕ ರೈತರು ತಮ್ಮ ಜಮೀನಿನಲ್ಲಿ ಉಳಿದುಕೊಳ್ಳಲು ಹಾಗೂ ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ.
ಇಲಾಖೆಯವರು ಚಿರತೆಯನ್ನು ಹಿಡಿದು ಅರಣ್ಯಕ್ಕೆ ಸ್ಥಳಾಂತರಿಸಬೇಕು ಎಂಬುದು ಆಗ್ರಹಿಸಿದ್ದಾರೆ.

andolanait

Recent Posts

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟನೆ

ಧಾರವಾಡ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಈ ಬಗ್ಗೆ ಈವರೆಗೂ ಚರ್ಚೆ ನಡೆದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

29 mins ago

ಡಿಕೆಶಿಗೆ ಮೇ.15ರೊಳಗೆ ಸಿಗಲಿದೆ ಸಿಹಿಸುದ್ದಿ: ಕುಣಿಗಲ್‌ ಶಾಸಕ ರಂಗನಾಥ್‌ ವಿಶ್ವಾಸ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಗಲ್‌ ಶಾಸಕ ಡಾ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ…

59 mins ago

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…

1 hour ago

ಮೈಸೂರಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್‌ ಬ್ರಿಡ್ಜ್‌ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…

2 hours ago

ಬಿಸಿಲ ಬೇಗೆಗೆ ಕಾದು ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…

2 hours ago

ಒಳಮೀಸಲಾತಿ: ಕರ್ನಾಟಕ ಮಾಡೆಲ್

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…

4 hours ago