ಕಂಚಮಲ್ಲಿ ಗೇಟ್ ಸ್ವಾಗತ ಕಮಾನು ಸಮೀಪ ತಡರಾತ್ರಿ ಚಿರತೆ ಪತ್ತೆ
ಮೈಸೂರು: ಜಿಲ್ಲೆಯಾದ್ಯಂತ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯೇಕ್ಷವಾಗುತ್ತಿದ್ದು, ಇದೀಗ ಮೈಸೂರು ಮಾನಂದವಾಡಿ ರಸ್ತೆಯ ಕಂಚಮಳ್ಳಿ ಗೇಟ್ ಸಮೀಪ ಇರುವ ಸ್ವಾಗತ ಕಮಾನು ಬಳಿ ಚಿರತೆ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಶನಿವಾರ ರಾತ್ರಿ 1ಗಂಟೆ 15 ನಿಮಿಷಕ್ಕೆ ಚಿರತೆ ಕಾಣಿಸಿಕೊಂಡಿದೆ. ಹಂಪಾಪುರದ ಗ್ರಾಮಸ್ಥರೊಬ್ಬರು ರಾತ್ರಿ ತಮ್ಮ ಕೆಲಸ ಮುಗಿಸಿ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಚಿರತೆಯೊಂದು ಹೋಗುತ್ತಿದ್ದನ್ನು ನೋಡಿದ್ದಾರೆ. ನಾಯಿಯೊಂದು ರಸ್ತೆ ದಾಟುತ್ತಿದೆ ಎಂದು ಸಮೀಪ ಹೋಗುತ್ತಿದ್ದಾಗ ಹಾಗೆ ಚಿರತೆ ಬೈಕ್ ಹಾರನ್ ಶಬ್ಧಕ್ಕೆ ಓಡಿಹೋಯಿತು ಎಂದು ಹೇಳಿದ್ದಾರೆ.
ಈ ಹಿಂದೆಯು ಹಂಪಾಪುರ ಗ್ರಾಮದಲ್ಲಿ ಮನೆ ಹಿಂಭಾಗ ಚಿರತೆ ಬಂದು ಹೋಗಿದ್ದ ಗುರುತು ಸಿಕ್ಕಿದ್ದು ಸಂಬಂಧಪಟ್ಟ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಆದರೆ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಚಿರತೆ ಭಯದಿಂದ ಸ್ಥಳೀಯ ನಿವಾಸಿಗಳು, ಬಹುತೇಕ ರೈತರು ತಮ್ಮ ಜಮೀನಿನಲ್ಲಿ ಉಳಿದುಕೊಳ್ಳಲು ಹಾಗೂ ಮನೆಗಳಿಂದ ಹೊರಬರಲು ಹೆದರುತ್ತಿದ್ದಾರೆ.
ಇಲಾಖೆಯವರು ಚಿರತೆಯನ್ನು ಹಿಡಿದು ಅರಣ್ಯಕ್ಕೆ ಸ್ಥಳಾಂತರಿಸಬೇಕು ಎಂಬುದು ಆಗ್ರಹಿಸಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…