Mysore
20
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮೈಸೂರು: ಬಾಲಕನ ಬಲಿ ಪಡೆದ ಚಿರತೆ ಬೋನಿನಲ್ಲಿ ಸೆರೆ

ಮೈಸೂರು : ಜನವರಿ 21ರಂದು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಗ್ರಾಮ ಹೊರವಲಯದಲ್ಲಿ ಇಂದು ಮುಂಜಾನೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರಿತೆ ಬಿದ್ದಿದೆ. ಸ್ಥಳದಲ್ಲಿ ಜನರು ಮುಗಿಬಿದ್ದರು. ಇಲಾಖೆ ಅಧಿಕಾರಿಗಳು ಆಗಮಿಸಿದ್ದರು. 

ಈ ಸಂದರ್ಭದಲ್ಲಿ ಬಾಲಕನ ಕೊಂದು ಹಾಕಿದ ಚಿರತೆಯನ್ನು ಕೊಲ್ಲುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದರು. ಸ್ವಲ್ಪ ಹೊತ್ತು ಮಾತಿನ ಚಕಮಕಿಯೂ ನಡೆಯಿತು. ಸೆರೆ ಸಿಕ್ಕ ಚಿರತೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!