Mysore
25
heavy intensity rain

Social Media

ಶುಕ್ರವಾರ, 29 ಮೇ 2026
Light
Dark

ತಿ. ನರಸೀಪುರ : ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷ, ಜನರಲ್ಲಿ ಭೀತಿ

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.

ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.

ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು

ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!