ಜಿಲ್ಲೆಗಳು

ತಿ. ನರಸೀಪುರ : ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷ, ಜನರಲ್ಲಿ ಭೀತಿ

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.

ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.

ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು

ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,

andolanait

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

6 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

9 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

10 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

10 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

10 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

11 hours ago