ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.
ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.
ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು
ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…