ಜಿಲ್ಲೆಗಳು

ತಿ. ನರಸೀಪುರ : ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷ, ಜನರಲ್ಲಿ ಭೀತಿ

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.

ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.

ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು

ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,

andolanait

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

5 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

7 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

16 hours ago