ಜಿಲ್ಲೆಗಳು

ತಿ. ನರಸೀಪುರ : ಇಟ್ಟಿಗೆಗೂಡಿನ ಬಳಿ ಚಿರತೆ ಪ್ರತ್ಯಕ್ಷ, ಜನರಲ್ಲಿ ಭೀತಿ

ತಿ. ನರಸೀಪುರ : ತಾಲ್ಲೂಕಿನ ಕೇತುಪುರ ಗ್ರಾಮದ ಸಮೀಪದ ಇಟ್ಟಿಗೆಗೂಡಿನ ಬಳಿ ಚಿರತೆ ಶನಿವಾರ ಸಂಜೆ ಕಾಣಿಸಿಕೊಂಡು ಜನರನ್ನು ಭಯಬೀಳಿಸಿದೆ.

ಗ್ರಾಮದ ಅರುಣ್ ಕುಮಾರ್ ರವರು ಶನಿವಾರ ಸಂಜೆ 5 ಗಂಟೆ ವೇಳೆಗೆ ತಮ್ಮ ಇಟ್ಟಿಗೆ ಗೂಡಿರುವ ಜಮೀನಿಗೆ ತೆರಳಿದ್ದ ವೇಳೆ ಚಿರತೆ ಕಾಣಿಸಿಕೊಂಡಿದೆ. ತಕ್ಷಣವೇ ಗಾಬರಿಗೊಂಡ ಅರುಣ್ ಅಲ್ಲಿಂದ ಓಡಿ ಬಂದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಉಪವಲಯಅರಣ್ಯಾಧಿಕಾರಿ ಯಮುನಾ ಮತ್ತು ಸಿಬ್ಬಂದಿ, ಬಂಡಿಪುರ ಹುಲಿ ರಕ್ಷಣಾ ಕಾರ್ಯಪಡೆ ತಂಡದವರು ಕೂಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಚಿರತೆ ಕಾಣಿಸಿಕೊಂಡ ಜಾಗಕ್ಕೆ ತೆರಳಿ ಪರಿಶೀಲಿಸಿ ಗುರುತು ಪತ್ತೆ ಹಚ್ಚಿ ಬೋನನ್ನು ಇರಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಲಯ ಅರಣ್ಯಾಧಿಕಾರಿ ಶಶಿಧರ್ ಅವರು, ಈಗಾಗಲೇ ಚಿರತೆ ಸೆರೆ ಹಿಡಿಯಲು ತೀವ್ರ ಕಾರ್ಯಾಚಾರಣೆ ನಡೆಯುತ್ತಿದೆ. ಮಾಹಿತಿ ಇರುವೆಡೆಯೆಲ್ಲಾ ಬೋನನ್ನು ಇರಿಸಲಾಗಿದೆ.

ಡ್ರೋಣ್ ಕ್ಯಾಮೆರಾ ಅಳವಡಿಸಲು ಸಿದ್ಧವಿದ್ದು, ಮಳೆ ಇರುವುದರಿಂದ ಡ್ರೋಣ್ ಬಿಡಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ಎರಡು ದಿನದಲ್ಲಿ ಡ್ರೋಣ್ ಕ್ಯಾಮರಾ ಬಳಸಿ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದರು

ರೈತ ಮುಖಂಡ ಕಳ್ಳಿಪುರ ಮಹಾದೇವಸ್ವಾಮಿ, , ಎಂ. ಎಲ್. ಹುಂಡಿ, ಕಳ್ಳಿಪುರ, ಕೇತುಪುರ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು ಜನರು ಜಮೀನುಗಳಿಗೆ ತೆರಳಲು ಭಯಭೀತರಾಗಿದ್ದಾರೆ. ಜಾನುವಾರು ಮತ್ತು ಮೇಕೆಯನ್ನು ಕಾಡಿಗೆ ಮೇಯಿಸಲು ಸಮಸ್ಯೆಯಾಗಿದೆ. ಅರಣ್ಯ ಇಲಾಖೆಯವರು ಆದಷ್ಟು ಶೀಘ್ರ ಚಿರತೆ ಸೆರೆಗೆ ಕಾರ್ಯಪ್ರವೃತ್ತರಾಗುವಂತೆ ಮನವಿ ಮಾಡಿದರು. ಈ ವೇಳೆ ಗ್ರಾಮದ ಮುಖಂಡರು ಹಾಜರಿದ್ದರು,

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago