ಜಿಲ್ಲೆಗಳು

ವಿದ್ಯಾರ್ಥಿ ಬಲಿ ಪಡೆದ ಚಿರತೆ ಮತ್ತೆ ಪ್ರತ್ಯಕ್ಷ

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ ಶನಿವಾರ ರಾತ್ರಿ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಳ್ಳುವ ಮೂಲಕ ಸುತ್ತಮುತ್ತಲಿನ ಗ್ರಾಮದ ಜನತೆಯಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.

ಯುವಕನನ್ನು ಬಲಿ ತೆಗೆದುಕೊಂಡ ಚಿರತೆ ಬೆಟ್ಟದ ತಪ್ಪಲಿನಲ್ಲಿರುವ ಮಠದ ಬಳಿ ಪತ್ತೆಯಾಗಿದೆ.. ಮಠದ ಗೇಟ್ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದಾರೆ. ಆದರೆ ಈವರೆಗೆ ಚಿರತೆ ಬೋನಿಗೆ ಬೀಳದಿರುವುದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.


ಅರಣ್ಯ ಇಲಾಖೆಯ ಅಧಿಕಾರಿಗೆ ಚಿರತೆ ಕಾಣಿಸಿಕೊಂಡ ವಿಡಿಯೋ ಕಳಿಸಿದ್ದೆ. ಅರಣ್ಯ ಇಲಾಖೆಯ ಅಧಿಕಾರಿ ಶಶಿಧರ್ ಹಾಗೂ ಯಮುನಾ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಠದ ಸಮೀಪ ಬೋನನ್ನು ಇಟ್ಟಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕೂಲಿ ಕೆಲಸಕ್ಕೂ ಹೋಗಲು ಭಯಭೀತರಾಗಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.
ಶ್ರೀ ಗೌರಿಶಂಕರ ಸ್ವಾಮೀಜಿ, ವೀರಶೈವ ಮಠ, ಎಂ.ಎಲ್.ಹುಂಡಿ.

andolanait

Recent Posts

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

17 mins ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

23 mins ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

42 mins ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

51 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

1 hour ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

1 hour ago