ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ ಶನಿವಾರ ರಾತ್ರಿ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಳ್ಳುವ ಮೂಲಕ ಸುತ್ತಮುತ್ತಲಿನ ಗ್ರಾಮದ ಜನತೆಯಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.
ಯುವಕನನ್ನು ಬಲಿ ತೆಗೆದುಕೊಂಡ ಚಿರತೆ ಬೆಟ್ಟದ ತಪ್ಪಲಿನಲ್ಲಿರುವ ಮಠದ ಬಳಿ ಪತ್ತೆಯಾಗಿದೆ.. ಮಠದ ಗೇಟ್ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದಾರೆ. ಆದರೆ ಈವರೆಗೆ ಚಿರತೆ ಬೋನಿಗೆ ಬೀಳದಿರುವುದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗೆ ಚಿರತೆ ಕಾಣಿಸಿಕೊಂಡ ವಿಡಿಯೋ ಕಳಿಸಿದ್ದೆ. ಅರಣ್ಯ ಇಲಾಖೆಯ ಅಧಿಕಾರಿ ಶಶಿಧರ್ ಹಾಗೂ ಯಮುನಾ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಠದ ಸಮೀಪ ಬೋನನ್ನು ಇಟ್ಟಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕೂಲಿ ಕೆಲಸಕ್ಕೂ ಹೋಗಲು ಭಯಭೀತರಾಗಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.
– ಶ್ರೀ ಗೌರಿಶಂಕರ ಸ್ವಾಮೀಜಿ, ವೀರಶೈವ ಮಠ, ಎಂ.ಎಲ್.ಹುಂಡಿ.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…