ಜಿಲ್ಲೆಗಳು

ವಿದ್ಯಾರ್ಥಿ ಬಲಿ ಪಡೆದ ಚಿರತೆ ಮತ್ತೆ ಪ್ರತ್ಯಕ್ಷ

ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ ಶನಿವಾರ ರಾತ್ರಿ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಳ್ಳುವ ಮೂಲಕ ಸುತ್ತಮುತ್ತಲಿನ ಗ್ರಾಮದ ಜನತೆಯಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.

ಯುವಕನನ್ನು ಬಲಿ ತೆಗೆದುಕೊಂಡ ಚಿರತೆ ಬೆಟ್ಟದ ತಪ್ಪಲಿನಲ್ಲಿರುವ ಮಠದ ಬಳಿ ಪತ್ತೆಯಾಗಿದೆ.. ಮಠದ ಗೇಟ್ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದಾರೆ. ಆದರೆ ಈವರೆಗೆ ಚಿರತೆ ಬೋನಿಗೆ ಬೀಳದಿರುವುದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.


ಅರಣ್ಯ ಇಲಾಖೆಯ ಅಧಿಕಾರಿಗೆ ಚಿರತೆ ಕಾಣಿಸಿಕೊಂಡ ವಿಡಿಯೋ ಕಳಿಸಿದ್ದೆ. ಅರಣ್ಯ ಇಲಾಖೆಯ ಅಧಿಕಾರಿ ಶಶಿಧರ್ ಹಾಗೂ ಯಮುನಾ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಠದ ಸಮೀಪ ಬೋನನ್ನು ಇಟ್ಟಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕೂಲಿ ಕೆಲಸಕ್ಕೂ ಹೋಗಲು ಭಯಭೀತರಾಗಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.
ಶ್ರೀ ಗೌರಿಶಂಕರ ಸ್ವಾಮೀಜಿ, ವೀರಶೈವ ಮಠ, ಎಂ.ಎಲ್.ಹುಂಡಿ.

andolanait

Recent Posts

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

3 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

3 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

3 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

3 hours ago