ತಿ.ನರಸೀಪುರ : ತಾಲ್ಲೂಕಿನ ಮದ್ಗಾರ ಲಿಂಗಯ್ಯನಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಚಿರತೆ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದರೂ ಅರಣ್ಯ ಇಲಾಖೆ ಚಿರತೆ ಹಿಡಿಯುವಲ್ಲಿ ವಿಫಲರಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.
ಯುವಕನನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ವೀರಶೈವ ವಿರಕ್ತ ಮಠದ ಮುಂಭಾಗ ಶನಿವಾರ ರಾತ್ರಿ ಸಿಸಿ ಕ್ಯಾಮೆರಾದಲ್ಲಿ ಚಿರತೆ ಕಾಣಿಸಿಕೊಳ್ಳುವ ಮೂಲಕ ಸುತ್ತಮುತ್ತಲಿನ ಗ್ರಾಮದ ಜನತೆಯಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.
ಯುವಕನನ್ನು ಬಲಿ ತೆಗೆದುಕೊಂಡ ಚಿರತೆ ಬೆಟ್ಟದ ತಪ್ಪಲಿನಲ್ಲಿರುವ ಮಠದ ಬಳಿ ಪತ್ತೆಯಾಗಿದೆ.. ಮಠದ ಗೇಟ್ ಬಳಿ ನಡೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದಾರೆ. ಆದರೆ ಈವರೆಗೆ ಚಿರತೆ ಬೋನಿಗೆ ಬೀಳದಿರುವುದು ಅರಣ್ಯ ಇಲಾಖೆ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗೆ ಚಿರತೆ ಕಾಣಿಸಿಕೊಂಡ ವಿಡಿಯೋ ಕಳಿಸಿದ್ದೆ. ಅರಣ್ಯ ಇಲಾಖೆಯ ಅಧಿಕಾರಿ ಶಶಿಧರ್ ಹಾಗೂ ಯಮುನಾ ಮಠಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಠದ ಸಮೀಪ ಬೋನನ್ನು ಇಟ್ಟಿದ್ದಾರೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು, ಕೂಲಿ ಕೆಲಸಕ್ಕೂ ಹೋಗಲು ಭಯಭೀತರಾಗಿದ್ದಾರೆ. ಕೂಲಿ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ.
– ಶ್ರೀ ಗೌರಿಶಂಕರ ಸ್ವಾಮೀಜಿ, ವೀರಶೈವ ಮಠ, ಎಂ.ಎಲ್.ಹುಂಡಿ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…